Breaking News

ಗರಿಗೆದರಿದ ಕಾಂಗ್ರೆಸ್ ಪಕ್ಷದ ಚುನಾವಣಪೂರ್ವ ಬೂತ್ ಮಟ್ಟದ ಸಂಘಟನಾ ಚಟುವಟಿಕೆ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಎರಡು ಸ್ಥಳಗಳಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಸಭೆ ನಡೆಯಿತು.
ಪಕ್ಷದ ನಾಯಕರಾದ ವಿ.ಎಸ್ ಪಾಟೀಲ್, ಶ್ರೀನಿವಾಸ್ ಭಟ್ ಧಾತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಡಿ.ಎನ್ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು.

ಜನರು ನೆಮ್ಮದಿಯ ಜೀವನ ನಡೆಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದು ಅನಿವಾರ್ಯವಾಗಿದೆ ಎಂಬುದು ನಾಯಕರ ಅಭಿಪ್ರಾಯವಾಗಿತ್ತು.


ಮಾಜಿ ಅಧ್ಯಕ್ಷ ವಿ.ಸ್ ಭಟ್ ಪ್ರಮುಖರಾದ ಎನ್.ಕೆ ಭಟ್, ಉಲ್ಲಾಸ ಶಾನಭಾಗ , ಎಂಡಿ ಮುಲ್ಲಾ, ತಾಲೂಕ ಮಹಿಳಾ ಸೆಲ್ ಅಧ್ಯಕ್ಷೆ ಪೂಜಾ ನೇತ್ರಕರ್, ಪಟ್ಟಣ ಪಂಚಾಯತ್ ಸದಸ್ಯರಾದ ಕೈಸರ್ ಅಲಿ, ನರ್ಮದ ನಾಯಕ್ , ಜಿಲ್ಲಾ ಕಮಿಟಿಯ ಸರಸ್ವತಿ ಗುನುಗ ,ಅನಿಲ್ ಮರಾಠೆ, ಇಡಗುಂದಿ ಘಟಕದ ಅಧ್ಯಕ್ಷ ರಾಘು ನಾಯಕ್ ಪ್ರಮುಖರಾದ ಎನ್.ಎನ್ ಹೆಬ್ಬಾರ್, ಜಿ.ವಿ ಭಟ್ , ಗಜಾನನ ಭಟ್ , ವೆಂಕಟೇಶ ಮತ್ತು ಕಾಳಮ್ಮನಗರ ಬೂತಿನ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.


ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಸ್ವಾಗತಿಸಿದರು. ನಗರ ಘಟಕದ ಉಸ್ತುವಾರಿ ರವಿಚಂದ್ರ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *