Breaking News

ಬೆಲೆ ಏರಿಕೆ ಆಡಳಿತ ವಿರೋದಿ ಅಲೆ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ – ವಿ.ಎಸ್.ಪಾಟೀಲ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ, ಯಲ್ಲಾಪುರ – ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ನನ್ನ ಶಾಸಕ ಸ್ಥಾನ ಈ ಕ್ಷೇತ್ರದಲ್ಲಿ ಪ್ರಾರಂಭವಾದಾಗಿನಿಂದ ಪ್ರಾರಂಭಿಸಿದ್ದು ಇಂದಿಗು ಕ್ಷೇತ್ರದ ತುಂಬಾ ಜನರ ಆತ್ಮೀಯತೆಯ ಮಾತುಗಳು ಮುಂದಿನ ಸೇವಾ ಕಾರ್ಯಕ್ಕೆ ಪ್ರೇರಣೆಯಾಗಿದೆ. ಜನರು ದಬ್ಬಾಳಿಕೆಯ ರಾಜಕಾರಾಣ ಅಂತ್ಯ ಹಾಡಿ ಸೌಮ್ಯ ರಾಜಕಾರಣವನ್ನು ಆಯ್ಕೆಮಾಡಲಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಬದಲಾವಣೆ ತರಲಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಹೇಳಿದರು.


ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಜನರ ಜೀವನ ಮಟ್ಟ ಅತ್ಯಂತ ಕಷ್ಟಕರವಾಗಿದ್ದು ಆರ್ಥಿಕತೆ ಸಾಕಷ್ಟು ಹಿನ್ಬಡೆಯಲಿದೆ. ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿನ ಅಗತ್ಯವಸ್ತುಗಳ ಬೆಲೆಗು ಈಗಿನ ಬಿಜೆಪಿ ಸರ್ಕಾರದ ಅವಧಿಯ ಬೆಲೆಗು ಹೋಲಿಕೆ ಮಾಡಿದರೆ ಸಾಕು ಜನಪರ ಸರ್ಕಾರ ಯಾವುದೆಂದು ತಿಳಿಯುತ್ತದೆ. ಜನಬೇಸತ್ತಿದ್ದು ಬದಲಾವಣೆ ಬಯಸಿದ್ದಾರೆ ಅದಕ್ಕಾಗಿ ಜನರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲಿದ್ದಾರೆ. ದೇಶವನ್ನು ಎಪ್ಪತ್ತು ವರ್ಷಗಳಿಂದ ಕಟ್ಟಿ ಬೆಳೆಸಿಕೊಂಡು ಬಂದಿರುವುದು ಕಾಂಗ್ರೆಸ್ ಪಕ್ಷವೆ ಆದರು ಬಿಜೆಪಿ ಯವರಿಗೆ ಹೇಳಿಕೊಳ್ಳಲು ವಿಷಯವಿಲ್ಲದೆ ಕಾಂಗ್ರೆಸ್ ಬಗ್ಗೆ ಜನರಿಗೆ ಸುಳ್ಳು ಸುದ್ದಿ ಹೇಳಿ ಮಂಕುಬೂದಿ ಎರಚುತ್ತಿದ್ದು ಜನರಿಗೆ ಸತ್ಯದ ಅರಿವಿದೆ ಎಂದು ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು.


ಇದಕ್ಕು ಮುನ್ನ ಪಟ್ಟಣದ ಗ್ರಾಮದೇವಿ ದೇವಸ್ಥಾನದ ಆವರಣದಿಂದ ರ‍್ಯಾಲಿ ಮೂಲಕ ನೂರಾರು ಸಂಖ್ಯೆಯ ಅಭಿಮಾನಿಗಳು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಚುನಾವಣಾ ವೀಕ್ಷಕ ಮರಿಯೋಜಿರಾವ್, ಪ್ರಮುಖರಾದ ಶ್ರೀನಿವಾಸ ಭಟ್ ಧಾತ್ರಿ, ವಿ.ಎಸ್.ಭಟ್, ಉಲ್ಲಾಸ್ ಶಾನಬಾಗ್, ಎನ್.ಕೆ.ಭಟ್, ರಾಘು ಭಟ್ , ರವಿಚಂದ್ರ ನಾಯ್ಕ್ ಇಂಜಿನಿಯರ್, ಎಸ್.ಎ.ಬ್ಯಾರಿ, ಅನಿಲ್ ಮರಾಠೆ , ಎಂಡಿ.ಮುಲ್ಲಾ ಮುಂತಾದವರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *