
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಯಲ್ಲಾಪುರ

ಪ್ರತಿಧ್ವನಿ, ಯಲ್ಲಾಪುರ – ತಂಬಾಕು ದುಶ್ಚಟದಿಂದ ಯುವ ಜನಾಂಗ ದೂರವಿರಬೇಕಾಗಿದೆ. ವೈಜ್ಞಾನಿಕ ಅಧ್ಯಯನದ ಪ್ರಕಾರ ಕ್ಯಾನ್ಸರ್ ರೋಗ ಹೆಚ್ಚಲು ತಂಬಾಕು ಉತ್ಪನ್ನ ಪ್ರಮುಖ ಕಾರಣವಾಗಿದೆ. ತಂಬಾಕು ಸೇವನೆಯಿಂದ ದೇಹದ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಸದೃಡತೆ ಕುಗ್ಗಲಿದೆ ದುಶ್ಚಟಗಳಿಂದ ದೂರ ಇರೋಣ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ” ವಿಶ್ವ ತಂಬಾಕು ರಹಿತ ದಿನಾಚರಣೆ ” ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.

ತಾಲೂಕು ಸರ್ಕಾರಿ ಆಸ್ಪತ್ರೆ ತಜ್ಞ ವೈದ್ಯೆ ಡಾ, ಸೌಮ್ಯ ತಂಬಾಕು ಸೇವನೆಯ ದುಷ್ಪರಿಣಾಮ, ಕೋಕಾ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ತಹಶಿಲ್ದಾರ ಗುರುರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ,ನರೇಂದ್ರ ಪವಾರ್, ಕಾಲೇಜು ಪ್ರಾಂಶುಪಾಲ ಡಿ.ಎಸ್.ಭಟ್ ಮಾತನಾಡಿದರು.ಯಲ್ಲಾಪುರ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೆ ಬಾರಿ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಅವರಿಗೆ ಕಾಲೇಜು ವತಿಯಿಂದ ಅಭಿನಂದಿಸಿ ಗೌರವಿಸಿದರು.
ನಮೃತಾ ಹೆಬ್ಬಾರ್ ಪ್ರಾರ್ಥಿಸಿದರು, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ ಸ್ವಾಗತಿಸಿದರು, ಎನ್.ಎಸ್.ಎಸ್ ಅಧಿಕಾರಿ ರಾಮಕೃಷ್ಣ ಗೌಡ ನಿರೂಪಿಸಿದರು. ಉಪನ್ಯಾಸಕಿ ಸವಿತಾ ನಾಯ್ಕ್ ವಂದಿಸಿದರು.





Prathidvani Yellapura