Breaking News

ಕೊಟ್ಟ ಮಾತಿನಂತೆ ನಡೆದು ಡೊಮಗೇರಿ ಮಕ್ಕಳಿಗೆ ಅಂಗನವಾಡಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಹಿಳೆ ಹಾಗೂ ಮಕ್ಕಳ ಮೇಲೆ ಮರ ಬಿದ್ದು, ಮಹಿಳೆ ಮತ್ತು ಮಕ್ಕಳು ಮೃತಪಟ್ಟ ಅಹಿತಕರ ಘಟನೆ ನಡೆದಿತ್ತು.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, “ಡೋಮಗೇರಿ ಗೌಳಿವಾಡದಲ್ಲೇ ನೂತನ ಅಂಗನವಾಡಿ ಕೇಂದ್ರವನ್ನು ಆರಂಭಿಸಲಾಗುವುದು” ಎಂದು ಭರವಸೆ ನೀಡಿದ್ದರು.

ಅದೇ ಭರವಸೆಯನ್ನು ಕಾರ್ಯರೂಪಕ್ಕೆ ತಂದಿರುವ ಶಾಸಕ ಶಿವರಾಮ ಹೆಬ್ಬಾರ್ ಅವರು, ಇಂದು ಡೋಮಗೇರಿ ಗೌಳಿವಾಡದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸುವ ಮೂಲಕ ತಾವು ನೀಡಿದ್ದ ಮಾತನ್ನು ಈಡೇರಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ತಾಲೂಕಾಧ್ಯಕ್ಷ ಮಾಕು ಕೊಕರೆ ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಧನಗರ ಗೌಳಿ ಸಮುದಾಯದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪ್ರಥದರ್ಜೆ ಕಾಲೇಜಿನಲ್ಲಿ SIR ಕುರಿತ ಜಾಗೃತಿ ಕಾರ್ಯಕ್ರಮ.

ಪ್ರತಿಧ್ವನಿ ಯಲ್ಲಾಪುರ : ಮತದಾರರ ಪಟ್ಟಿಯ ಶುದ್ಧತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌.ಐ.ಆರ್ ಪ್ರಕ್ರಿಯೆ ಅತ್ಯಂತ ಮಹತ್ವಪೂರ್ಣ ಆಗಿದೆ. ಪ್ರತಿಯೊಬ್ಬ …

Leave a Reply

Your email address will not be published. Required fields are marked *