Breaking News

ವಿಶು ಸಂಭ್ರಮಕ್ಕೆ ಯಲ್ಲಾಪುರದಲ್ಲಿ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆ ಅನ್ನ ಪ್ರಸಾದ ವಿತರಣೆ


ಪ್ರತಿಧ್ವನಿ,ಯಲ್ಲಾಪುರ: ಕಲಿಯುಗ ವರದ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವರ್ಷದಲ್ಲಿ ಮಕರ ಸಂಕ್ರಾತಿ ಎಷ್ಟು ಶ್ರೇಷ್ಟವೊ ಅಷ್ಟೆ ಶ್ರೇಷ್ಠ ವಿಶು ಪೂಜಾ ಕಾರ್ಯವಾಗಿದೆ. ಇದು ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ಬರಲಿದ್ದು ಯಲ್ಲಾಪುರದಲ್ಲಿ ಜೋಡುಕೆರೆ ಮಣಿಕಂಠ ಸನ್ನಿದಾನದಲ್ಲಿ ವಿಶು ಸಂದರ್ಭದ ಅಯ್ಯಪ್ಪ ದರ್ಶನಕ್ಕಾಗಿ ಕೆಲವು ಭಕ್ತರು ಮಾಲಾಧಾರಣೆ ಮಾಡಿದ್ದು ವೃತ ಪೂಜೆಯನ್ನು ಅತ್ಯಂತ ಶ್ರದ್ದಾಭಕ್ತಿಯಿಂದ ನೆರವೇರಿಸಿದರು.


ಸನ್ನಿದಾನದಲ್ಲಿ ನಡೆದ ವಿಶೇಷ ಪಡಿ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆಯನ್ನು ಮಾಡಲಾಯಿತು.


ಸಕಲ ಇಷ್ಟಾರ್ಥಗಳನ್ನು ಈಡೇರಿಸುವ ಭಗವಂತ ಅಯ್ಯಪ್ಪ ಸ್ವಾಮಿಯನ್ನು ದರ್ಶಿಸಿ ಸಾರ್ವಜನಿಕ ಭಕ್ತಾದಿಗಳು ಪುನಿತರಾದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *