
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಸಡಿಲವಾಗಿ ಪಕ್ಕದಲ್ಲೆ ಹಾದು ಹೋದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿದೆ.
ವಿಷಯ ತಿಳಿಯುತ್ತಲೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿಗಳು ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದರು. ಇದರಿಂದ ಸಂಚಾರಕ್ಕೆ ಯಾವುದೆ ಅಡಚಣೆಯಾಗಿಲ್ಲ.

ಕಳೆದ ಎರಡು ವರ್ಷದ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಅರಬೈಲ್ ಘಟ್ಟದಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಅದರಲ್ಲೆ ಒಂದು ಸ್ಥಳದಲ್ಲಿ ಈ ರೀತಿ ಮಣ್ಣು ಸಡಿ¯ವಾಗಿ ಕುಸಿದಿದ್ದು ಸಂಚಾರಕ್ಕೆ ಸಮಸ್ಯೆಯಾಗದಂತೆ ಮಣ್ಣನ್ನು ತೆರವುಗೊಳಿಸಲಾಗಿದ್ದು ಯಾವುದೆ ಅಪಾಯವಿಲ್ಲ ಎಂದು ಹೆದ್ದಾರಿ ನಿರ್ವಹಣೆ ಸಿಬ್ಬಂದಿ ಮುರುಗೇಶ್ ಪತ್ರಿಕೆಗೆ ತಿಳಿಸಿದ್ದಾರೆ.
Prathidvani Yellapura