Breaking News

ಬಾಯಲ್ಲಿ ನೀರೂರಿಸುವ ಅಪ್ಪೆಮಿಡಿ ಉಪ್ಪಿನಕಾಯಿಗೆ ಮಾವಿನ ಮಿಡಿಗಳೇ ಸಾಕಷ್ಟು ಸಿಗುತ್ತಿಲ್ಲ.!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಯಥೇಚ್ಛವಾಗಿ ದೊರೆಯುತ್ತಿದ್ದ ಬಾಯಲ್ಲಿ ನೀರೂರಿಸುವ ಅಪ್ಪೆ ಮಿಡಿ ಮಾವಿನಕಾಯಿಗೆ ಬರ ಬಂದಂತಾಗಿದ್ದು ಈ ವರ್ಷ ಮಾರುಕಟ್ಟೆಯಲ್ಲಿ ದೊರೆಯುವುದೇ ವಿರಳವಾಗಿದೆ.


ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಯಲ್ಲಾಪುರ, ಶಿರಸಿ, ಸಿದ್ದಾಪುರ ಹಾಗೂ ದಾಂಡೇಲಿಯ ಕೆಲ ಭಾಗಗಳಲ್ಲಿ ಹೇರಳವಾಗಿ ದೊರೆಯುತ್ತಿದ್ದ ಅಪ್ಪೆಮಿಡಿ ಹಾಗೂ ಜೀರಿಗೆ ಮಾವು ನೂರು ಮಿಡಿಗಳಿಗೆ ಇಂತಿಷ್ಟು ಎಂದು ಮಾರಾಟವಾಗುತ್ತಿತ್ತು. ಈ ವರ್ಷ ಮಾವಿನಮಿಡಿ ಸಂಖ್ಯೆ ಕಡಿಮೆಯಾಗಿದ್ದು ಕೆ.ಜಿ ಲೆಕ್ಕದಲ್ಲಿ ಅದೂ ಒಂದು ಕೆಜಿಗೆ ಗರಿಷ್ಠ ರೂ.450 ರಂತೆ ಮಾರಾಟವಾಗುತ್ತಿದೆ. ಆದಾಗ್ಯೂ ತನ್ನ ಮೌಲ್ಯ ಕಳೆದುಕೊಳ್ಳದೇ ಗ್ರಾಹಕರನ್ನು ಸೆಳೆಯುತ್ತಿದೆ. ಒಟ್ಟಿನಲ್ಲಿ ಊಟದ ಜೊತೆ ಉಪ್ಪಿನಕಾಯಿ ಇಲ್ಲದೇ ಊಟವೇ ಸೇರದ ಅನೇಕರಿಗೆ ಸಂಕಷ್ಟ ಬಂದಂತಾಗಿದೆ.


ವರ್ಷದಿಂದ ವರ್ಷಕ್ಕೆ ಮಾವಿನ ಫಸಲು ಕಡಿಮೆಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಅಪ್ಪೆಮಿಡಿ ಹಾಗೂ ಜೀರಿಗೆ ಮಿಡಿ ಉಪ್ಪಿನಕಾಯಿಗೆ ಯೋಗ್ಯವಾಗಿದ್ದು ಹೊಳೆಬದಿಯ ಹಳೆಯ ಮರಗಳಲ್ಲಿ ಸಿಗುವ ಮಿಡಿ ಮಾವು ರುಚಿಕರವಾಗಿರುತ್ತದೆ. ಆದರೆ ಮನುಷ್ಯನ ಆಸೆಗೆ ಕೇವಲ ಮಿಡಿಗಳನ್ನು ಕೀಳದೇ ರೆಂಬೆಗಳನ್ನೇ ಕತ್ತರಿಸುತ್ತಿರುವುದು ಮತ್ತು ಗಾಳಿ-ಮಳೆಗೆ ಮರಗಳೇ ಉರುಳುತ್ತಿರುವುದು ರುಚಿಕರವಾದ ಮಾವಿನ ಮಿಡಿಗೆ ಧಕ್ಕೆ ತಂದೊಡ್ಡಿದೆ. ಕಾರಣ ಮಾರುಕಟ್ಟೆಯಲ್ಲಿ ಮಾಲು ಕಡಿಮೆಯಾಗಿದ್ದು ಬೆಲೆಯೂ ಹೆಚ್ಚಾಗಿದೆ.- ಅಜ್ಜು, ಮಕ್ಬುಲ್, ರಶೀದ್ ಮಾವಿನ ಮಿಡಿ ವ್ಯಾಪಾರಿಗಳು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *