Breaking News

2027 ರ ಜನಗಣತಿಯ ಪೂರ್ವಬಾವಿ ಸ್ವಯಂಗಣತಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು.

ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನಗಣತಿ ಮಹಾಕಾರ್ಯದ ಪ್ರಯುಕ್ತ ಮನೆಗಣತಿಗು ಮುನ್ನ ಪೂರ್ವಭಾವಿಯಾಗಿ ನಡೆಯುತ್ತಿರುವ ” ಸ್ವಯಂಗಣತಿ ಕಾರ್ಯಕ್ಕೆ ” ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮನೆಗಣತಿ ಕಾರ್ಯವು ಜನಗಣತಿಯ ಪ್ರಮುಖ ಹಂತವಾಗಿದ್ದು ವಿಶೇಷವಾಗಿ ಸ್ವಯಂ ಗಣತಿ ಕಾರ್ಯ ಏ,1 ರಿಂದ 15 ರ ವರೆಗೆ ನಡೆಯುತ್ತಿದ್ದು ಸಾರ್ವಜನಿಕರು ಸ್ವಯಂ ಗಣತಿಗೆ ಅವಕಾಶವಿದೆ. ಪ್ರತಿಯೊಬ್ಬ ನಾಗರಿಕರು ನಿಖರವಾದ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವನಜಾಕ್ಷಿ ಶಿವರಾಮ ಹೆಬ್ಬಾರ್, ತಹಶಿಲ್ದಾರರ ಚಂದ್ರಶೇಖರ ಕಮ್ಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವಜ್ರಳ್ಳಿಯಲ್ಲಿ ಭಾಗ್ಯಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕೋತ್ಸವ…

ಪ್ರತಿಧ್ವನಿ ಯಲ್ಲಾಪುರ : ನಿತ್ಯ ಬದುಕಿನ ಒತ್ತಡದ ನಡುವೆಯೂಸಾಮಾಜಿಕ ಚಟುವಟಿಕೆಗಳಲ್ಲಿ ಮಹಿಳೆಯರು ಭಾಗವಹಿಸುವ‌ ಮೂಲಕ ಉತ್ತಮ ಕೊಡುಗೆ ನೀಡಲು ಸಶಕ್ತವಾಗಬೇಕಾದರೆ …

Leave a Reply

Your email address will not be published. Required fields are marked *