Breaking News

ಜಿಲ್ಲೆಯಲ್ಲಿಯೇ ಮೊಟ್ಟ ಮೊದಲು ಬಿ ಹಾಗೂ ಇ-ಖಾತಾ ಪಟ್ಟ ವಿತರಿಸಿದ ಶಾಸಕ ಹೆಬ್ಬಾರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಜಾಗ ಕೊಂಡು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರ ಸಂಕಷ್ಟ ಇಂದು ದೂರಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಯಕತ್ವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರರ ಮುಖಂಡತ್ವದಲ್ಲಿ ಬಿ ಹಾಗೂ ಇ-ಖಾತಾ ಪಟ್ಟ ನೀಡುವ ಕಾರ್ಯಕ್ಕೆ ಶ್ರಮಿಸಿದ ಫಲವೇ ಇಂದು ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ. ಇಂತಹ ಜನೋಪಯೋಗಿ ಕಾರ್ಯಕ್ಕೆ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರ ಯಾವುದೇ ಇರಲಿ ಜನೋಪಯೋಗಿ ಕಾರ್ಯವನ್ನು ಅಭಿನಂದಿಸಬೇಕಿರುವುದು ಮಾನವೀಯ ಮೌಲ್ಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ಪಟ್ಟಣ ಪಂಚಾಯತ ಆವರಣದಲ್ಲಿ ಮಾ. 10 ರಂದು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಪಟ್ಟಣ ಪಂಚಾಯತ ಯಲ್ಲಾಪುರ ಇವರು ಹಮ್ಮಿಕೊಂಡ ಕರ್ನಾಟಕ ಸರ್ಕಾರದ ಹೆಮ್ಮೆಯ ಕಾರ್ಯಕ್ರಮ ಇ-ಖಾತಾ ಅಭಿಯಾನದಲ್ಲಿ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಅಧಿಕೃತ ಪಟ್ಟಾ ವಿತರಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಫಲಾನುಭವಿಗಳ ಪರವಾಗಿ ಆರೋಗ್ಯ ಇಲಾಖೆಯ ನಿವೃತ್ತ ನೌಕರ ಎಸ್.ಟಿ ಭಟ್ಟ , ಸದಾನಂದ ಭಟ್ಟ ಮಲವಳ್ಳಿ ಮಾತನಾಡಿದರು.ಪ.ಪಂ ಅಧ್ಯಕ್ಷೆ ನರ್ಮದಾ ರವೀಂದ್ರ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ, ಸ್ಥಾಯಿ ಸಮಿತಿ ಅಧ್ಯಕ್ಷ ನೂತನನಗರ ಅಲಿ, ಮಾಜಿ ಅಧ್ಯಕ್ಷೆ ಸುನಂದಾ ದಾಸ್, ಮುಖ್ಯಾಧಿಕಾರಿ ಸುನಿಲ್ ಗಾವಡೆ ಇನ್ನಿತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *