Breaking News

TMS ಆಡಳಿತಾಧಿಕಾರಿ ಸರ್ವಾಧಿಕಾರಿ ಯಂತೆ ವರ್ತಿಸುತ್ತಿರುವುದು ವಿಷಾದನಿಯ – ಎನ್.ಕೆ ಭಟ್ ಅಗ್ಗಾಶಿಕುಂಬ್ರಿ.


ಪ್ರತಿಧ್ವನಿಯಲ್ಲಾಪುರ : ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಆಡಳಿತ ಅಧಿಕಾರಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಕಾರ್ಯ ನಿರ್ವಹಿಸುತ್ತಿರುವುದು ವಿಷಾದನಿಯ. ಎರಡು ಸಾವಿರ ಸದಸ್ಯರ ಹಕ್ಕನ್ನು ಮೊಟಕು ಮಾಡಿ, ಹಣವಂತರಿಗೆ ಅನುಕೂಲ ಕಲ್ಪಿಸುವ ಕಾರ್ಯ ಮಾಡುತ್ತಿರುವುದು ರೈತರ ದುರಂತವಾಗಿದೆ.. ಇವರನ್ನು ತಕ್ಷಣದಿಂದ ತೆಗೆದುಹಾಕಬೇಕು ಎಂದು ಟಿ.ಎಂ.ಎಸ್.ನ ಮಾಜಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಆಗ್ರಹಿಸಿದ್ದಾರೆ.

ಅವರು, ಮಂಗಳವಾರ ಪಟ್ಟಣದ ಶ್ರೀ ಶಕ್ತಿಗಣಪತಿ ದೇವಸ್ಥಾನದ ಆವಾರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈ ಕುರಿತು ಬುಧವಾರ ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸುವುದಲ್ಲದೇ, ನಮ್ಮ ಪ್ರತಿಭಟನೆಗೆ ಹಿರಿಯ ಅಧಿಕಾರಿಗಳು ಸ್ಪಂದಿಸದಿದ್ದರೆ ಗುರುವಾರ ಶಿರಸಿ ರಸ್ತೆಯ ತಡೆ ಚಳುವಳಿ ನಡೆಸುತ್ತೇವೆ. ಆಡಳಿತ ಮಂಡಳಿ ನಿರ್ವಹಿಸಬೇಕಾದ ಕಾರ್ಯವನ್ನು ಆಡಳಿತಾಧಿಕಾರಿ ಮಾಡುತ್ತಿರುವುದು ತೀರಾ ಅಪರಾಧ. ಇದು ಅಧಿಕಾರಿಯ ವ್ಯಾಪ್ತಿ ಮೀರಿ ನಡೆದಂತಾಗಿದೆ. ಆದ್ದರಿಂದ ಅವರನ್ನು ವಜಾಗೊಳಿಸಬೇಕು. ಸಂಸ್ಥೆಯನ್ನು ಉಳಿಸುವ ಬಗ್ಗೆ ನಮ್ಮ ಈ ಹೋರಾಟ. ನಮ್ಮ ಸಹಕಾರಿ ಸಂಘದಲ್ಲಿ ಮಾರ್ಚ್ ಕೊನೆಗೆ ರಿನೆವಲ್ ಆಗದೇ ರೈತರು ತೊಂದರೆಗೆ ಸಿಲುಕುವುದಲ್ಲದೇ ಏಪ್ರಿಲ್‌ನಲ್ಲ ಕೆ.ಡಿ.ಸಿ.ಸಿ. ಬ್ಯಾಂಕ್‌ನಲ್ಲೂ ರಿನೆವಲ್ ಆಗದೇ ಸಂಘ ತೊಂದರೆಗೆ ಸಿಲುಕಲಿದೆ. ನಮ್ಮ ಅನೇಕ ಸದಸ್ಯರಿಗೆ ಆಸ್ಪತ್ರೆ, ಮಂಗಲಕಾರ್ಯ ಸೇರಿದಂತೆ ಹಲವಾರು ತುರ್ತು ಕಾರ್ಯಗಳಿಗೆ ಹಣ ಬೇಕಾಗುತ್ತದೆ. ಅಂತಹವರು ಇಂದು ಖಾಸಗಿ ಸಾಲಕ್ಕೆ ಬೀಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಆದ್ದರಿಂದ ಜನಪರವಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಪ್ರಮೋದ ಹೆಗಡೆ, ಹರಿಪ್ರಕಾಶ ಕೋಣೆಮನೆ, ಗೋಪಾಲಕೃಷ್ಣ ಗಾಂವ್ಕರ, ಜಿ.ವಿ.ಹೆಗಡೆ, ವಿ.ಎನ್.ಭಟ್ಟ ಬೆಳ್ಳಿ, ವೆಂಕಟ್ರಮಣ ಕಿರುಕುಂಭತ್ತಿ, ಸುಬ್ಬಣ್ಣ ಬೋಳ್ಮನೆ, ನಾಗರಾಜ ಕವಡಿಕೆರೆ, ಗಣಪತಿ ಮಾನಿಗದ್ದೆ, ಅಪ್ಪು ಆಚಾರಿ, ರಾಜೇಂದ್ರ ಗೌಡರ್ ಮತ್ತಿತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲೊಂದು ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವು- ಹಿಂಬದಿ ಸವಾರನಿಗೆ ಗಂಭೀರ ಗಾಯ.

ಪ್ರತಿಧ್ವನಿ ಯಲ್ಲಾಪುರ : ಪಟದಟಣದ ಹೊರವಲಯ ಮಗೋಡು ಕ್ರಾಸ್ ಸಮೀಪ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ …

Leave a Reply

Your email address will not be published. Required fields are marked *