Breaking News

ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 95 % : ವಾಣಿಜ್ಯ ವಿಭಾಗದ ಪ್ರಾರ್ಥನಾ ಭಟ್ಟ ಕಾಲೇಜಿಗೆ ಪ್ರಥಮ ; ಜಿಲ್ಲೆಗೆ 3 , ರಾಜ್ಯಕ್ಕೆ 7 ನೇ ಸ್ಥಾನ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : 2023-24 ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 118 ವಿದ್ಯಾರ್ಥಿಗಳಲ್ಲಿ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ 53 ಉನ್ನತ ಶ್ರೇಣಿ, 51 ಪ್ರಥಮ ಶ್ರೇಣಿ, 8 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣ ಆಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 98%, ವಾಣಿಜ್ಯ ವಿಭಾಗದಲ್ಲಿ 100% ಹಾಗೂ ಕಲಾ ವಿಭಾಗದಲ್ಲಿ 81% ಫಲಿತಾಂಶ ಬಂದಿದ್ದು ಕಾಲೇಜಿನ ಒಟ್ಟಾರೆ ಫಲಿತಾಂಶ 95% ಆಗಿರುತ್ತದೆ. ಸಂಸ್ಕೃತದಲ್ಲಿ 3, ಲೆಕ್ಕಶಾಸ್ತ್ರದಲ್ಲಿ 2, ಸಂಖ್ಯಾಶಾಸ್ತ್ರದಲ್ಲಿ 1, ಅರ್ಥಶಾಸ್ತ್ರದಲ್ಲಿ 2, ಗಣಿತದಲ್ಲಿ 4, ಜೀವಶಾಸ್ತ್ರದಲ್ಲಿ 3, ವಿದ್ಯಾರ್ಥಿಗಳು ಸೇರಿ ಒಟ್ಟು 15 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಪ್ರಾರ್ಥನಾ ಭಟ್ಟ ಜಿಲ್ಲೆಗೆ 3 ಹಾಗೂ ರಾಜ್ಯಕ್ಕೆ 6 ನೆ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ. ಕಾಲೇಜಿನಲ್ಲಿ 15 ವಿಷಯಗಳನ್ನು ಬೋಧಿಸುತ್ತಿದ್ದು 11 ವಿಷಯಗಳಲ್ಲಿ 100 ಕ್ಕೆ 100 ಫಲಿತಾಂಶ ಬಂದಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿರುತ್ತಾರೆ.
ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಲಕ್ಷ್ಮಣ ಶಾನಭಾಗ , ಉಪಾಧ್ಯಕ್ಷ ಪ್ರಸನ್ನ ಗುಡಿಗಾರ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರೂ ಪ್ರಾಂಶುಪಾಲ ಆನಂದ ಹೆಗಡೆ ಮತ್ತು ಎಲ್ಲಾ ಉಪನ್ಯಾಸಕ, ಶಿಕ್ಷಕ ವರ್ಗದವರೂ ಹಾಗೂ ಶಿಕ್ಷಕೇತರ ಸಿಬ್ಬಂದಿಗಳೂ ಸಂಸ್ಥೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನೂ ಅಭಿನಂದಿಸಿದ್ದಾರೆ.

ವಾಣಿಜ್ಯ ವಿಭಾಗ – ಪ್ರಾರ್ಥನಾ ಭಟ್ಟ ಪ್ರಥಮ 591/600 = 98.50% , ಶ್ರೇಯಾ ಭಾಸ್ಕರ ಭಟ್ಟ ದ್ವಿತೀಯ 580/600= 96.67% ,  ರಘುನಾಥ ಜಿ ಭಟ್ಟ ತೃತೀಯ 577/600= 96.16% ಸ್ಥಾನ;ಪಡೆದಿರುತ್ತಾರೆ.

ವಿಜ್ಞಾನ ವಿಭಾಗ – ನಯನಾ ಭಟ್ಟ ಪ್ರಥಮ 586/600= 97.67% , ಅದಿತಿ ವಿ ಭಟ್ಟ ದ್ವಿತೀಯ 576/600= 96% , ಮೇಧಾ ಡಿ ಹೆಗಡೆ ತೃತೀಯ 575/600= 95.83% ಸ್ಥಾನ ಪಡೆದಿರುತ್ತಾರೆ.

ಕಲಾ ವಿಭಾಗ – ಓಂಕಾರೇಶ್ವರಿ ಡಿ ಮಿರಾಶಿ ಪ್ರಥಮ 547/600= 91.17% ,   ಪ್ರಜಿತಾ ಪಿ ವೆಲಿಪ್ ದ್ವಿತೀಯ 517/600 = 86.17% ,  ಶ್ವೇತಾ ಹುಣಸಗಿ ತೃತೀಯ 512/600= 85.33% ಸ್ಥಾನ ಪಡೆದಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *