Breaking News

ಅತಿ ಹೆಚ್ಚು ದಿನಗಳು ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು – ರಾಮುನಾಯ್ಕ್.

ಪ್ರತಿಧ್ವನಿ ಯಲ್ಲಾಪುರ : 2014 ಮೇ 26 ರಂದು ದೇಶದ ಪ್ರಧಾನಮಂತ್ರಿ ಪದ ಸ್ವೀಕರಿಸಿದ ಮೋದಿಜೀ, ಇಂದು 4399 ದಿನಗಳನ್ನು ಪೂರೈಸಿ, ಭಾರತದ ಮೊಟ್ಟ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ದಾಖಲೆ ಮುರಿದು ಮುಂದೆ ಹೆಜ್ಜೆ ಇಟ್ಟಿದ್ದಾರೆ. ಈ ಹನ್ನೆರಡು ವರ್ಷಗಳ ಅವಧಿಯಲ್ಲಿ ದೇಶ ಅಪರಿಮಿತ ಅಭಿವೃದ್ಧಿ ಸಾಧಿಸಿದೆ.

ಗಡಿಗಳು ಸಧ್ರಡಗೊಂಡಿವೆ. ಸೈನ್ಯದ ವಿಶ್ವಾಸ ಇಮ್ಮಡಿಯಾಗಿದೆ. ಮೋದಿ ಭಾರತ ಈಗ ಮೊದಲಿನಂತಿಲ್ಲ. “ಘುಸಕೆ ಮಾರೇಂಗೆ” ಕೇವಲ ಸ್ಲೋಗನ್ನಲ್ಲ, ಶತ್ರು ರಾಷ್ಟ್ರಗಳಿಗೆ ಮುಟ್ಟಿ ನೋಡಿಕೊಳ್ಳುವಂತ ಏಟು ಬೀಳುತ್ತಿದೆ. ಇಲ್ಲಿಯವರೆಗೆ ನಮ್ಮನ್ನು ಆಟ ಆಡಿಸುತ್ತಿದ್ದ ಅಮೇರಿಕಾ, ರಷ್ಯಾ, ಚೀನಾ, ಜಪಾನ ಮುಂತಾದ ವಿಶ್ವದ ಬಲಾಢ್ಯ ರಾಷ್ಟ್ರಗಳು ಈಗ ಅನವರತ ಮೋದಿ ಸಂಗ ಬಯಸುತ್ತಿವೆ

ಆರ್ಥಿಕವಾಗಿಯೂ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ. ಇಂತಹ ಭಾರತವನ್ನು ಸ್ವಾತಂತ್ರ್ಯದ ಶತಾಬ್ದಿ ವರ್ಷ 2047 ರ ವೇಳೆಗೆ, “ವಿಶ್ವಗುರು” ಪಟ್ಟಕ್ಕೆ ಏರಿಸಲು ಗಟ್ಟಿಯಾದ ಅಡಿಪಾಯ ಹಾಕುತ್ತಿರುವ ಮೋದಿಯವರಿಗೆ ಈ ಸಂದರ್ಭದಲ್ಲಿ ಯಶಸ್ಸನ್ನು ಕೋರೋಣ. ಬೆಂಬಲವನ್ನೂ ನೀಡೋಣ ಎಂದು ಹಿರಿಯ ಬಿಜೆಪಿ ಪ್ರಮುಖ ರಾಮುನಾಯ್ಕ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬೇಡ್ತಿ-ಅಘನಾಶನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ವೃಕ್ಷಾಪರೋಪಣ ಹಸಿರು ಸಮಾರಂಭ.

ಕೇಬಲ್ ನಾಗೇಶ್, ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ:  ಸರ್ಕಾರಕ್ಕೆ  ಬೇಡ್ತಿ ಯೋಜನೆ ಮಾಡುವುದಕ್ಕೆ ಬಹಳ ಅವಸರ ಮತ್ತು ಆಸಕ್ತಿ. ಆದ್ದರಿಂದ ನದಿ …

Leave a Reply

Your email address will not be published. Required fields are marked *