Breaking News

” ARM ಟ್ರೈಲರ್ ” ಗೆ   ಜನ ಮೆಚ್ಚುಗೆಯ ಸುರಿಮಳೆ

ಬೆಂಗಳೂರು: ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್‌ ಎಂ ಚಿತ್ರದ ಟ್ರೈಲರ್ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ.
ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.


ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ


ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *