
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖಲಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು.

ಲೋಕ್ ಅದಾಲತ್ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಜಿ.ಬಿ ಹಳ್ಳಕಾಯಿ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 72 ಪ್ರಕರಣಗಳಲಿ ಒಟ್ಟು 17 ಪ್ರಕರಣಗಳು ಇತ್ಯರ್ಥವಾದವು. ಸಂಧಾನಕಾರರಾಗಿ ವಕೀಲ ರವಿ ಶಿವನಗೌಡ ಪಾಟೀಲ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 69,68,670 ರೂ ಭರಣ ಮಾಡಲಾಯಿತು.

ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಅವರು ಸಿವಿಲ್ ನ್ಯಾಯಾಲಯದಲ್ಲಿ ದಾಖಲಾದ ಮತ್ತು 1153 ಪ್ರಕರಣಗಳಲ್ಲಿ 1044 ಪ್ರಕರಣಗಳನ್ನು ಇತ್ಯರ್ಥಪಡಿಸಿದರು. ಸಂಧಾನಕಾರರಾಗಿ ವಕೀಲ ನಾಗೇಶ್ ಕೆ ಭಾಗ್ವತ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 22,81,667 ರೂ ಭರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಹಿರಿಯ ವಕೀಲರು, ಸರ್ಕಾರಿ ವಕೀಲರು, ಸೊಸೈಟಿ ಹಾಗೂ ಬ್ಯಾಂಕಿನ ಅಧಿಕಾರಿಗಳು, ಕಕ್ಷಿದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದು ರಾಷ್ಟಿçÃಯ ಲೋಕ್ ಅದಾಲತ್ ಯಶಸ್ವಿಗೊಳಿಸಿದರು.
Prathidvani Yellapura