Breaking News

ರಾಜ್ಯದಲ್ಲಿ ವಿದ್ಯುತ್ ವಿತರಣೆ ಕಾರ್ಯ ಟಾಟಾ ಪವರ್ ಗೆ ನೀಡುವ ಹುನ್ನಾರ – ಯಲ್ಲಾಪುರ ಹೆಸ್ಕಾಂನಿಂದ ಪ್ರತಿಭಟನೆ


ಪ್ರತಿಧ್ವನಿ ಯಲ್ಲಾಪುರ : ವಿದ್ಯುತ್ ವಿತರಣೆಯನ್ನು ಟಾಟಾ ಪವರ್ ಕಂಪನಿಗೆ ನೀಡುವುದನ್ನು ವಿರೋಧಿಸಿ ಪಟ್ಟಣದ ಹೆಸ್ಕಾಂ ಉಪ ವಿಭಾಗದಲ್ಲಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ಹಾಗೂ ಹೆಸ್ಕಾಂ ಸಿಬ್ಬಂದ್ದಿಗಳು ಪ್ರತಿಭಟನೆ ನಡೆಸಿದರು.

ಸರಕಾರದ ನಿಲುವಿನಿಂದಾಗಿ ವಿದ್ಯುತ್ ಗುತ್ತಿಗೆದಾರರಿಗೂ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ತೊಂದರೆ ಯಾಗಿ ನಿರುದ್ಯೋಗಿಗಳಾಗುತ್ತಾರೆ. ವಿದ್ಯುತ್ ಕಂಪನಿಗಳ ಅಸ್ತಿತ್ವ, ಹಿತರಕ್ಷಣೆ, ನೌಕರ ಭವಿಷ್ಯದ ದೃಷ್ಟಿಯಿಂದ ಕಾರ್ಮಿಕರ ಉದ್ಯೋಗ ಭದ್ರತೆ, ಗ್ರಾಮೀಣ ಗ್ರಾಹಕರ ಹಿತರಕ್ಷಣೆಯ ಸಲುವಾಗಿ ಟಾಟಾ ಕಂಪನಿ ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಿಗೆ ಅನುಮತಿಯನ್ನು ತಿರಸ್ಕರಿಸಬೇಕು.

ಹೆಸ್ಕಾಂ ಎಇಇ ರಮಾಕಾಂತ ನಾಯ್ಕ,ಎಇ ಹೇಮಂತ,ಎಎಒ ವಿನಾಯಕ ಶೇಟ್ ಶಾಖಾಧಿಕಾರಿಗಳಾದ ನಾಗರಾಜ್ ಆಚಾರಿ, ಲಕ್ಷ್ಮಣ್ ಜೋಗಳೇಕರ್ ವಿಶಾಲ್ ಹೈಗರ್, ರೋಹಿತ್ ಎಸ್ ಹಾಗೂ ವಿದ್ಯುತ್ ನೌಕರರ ಸಂಘ ಅಧ್ಯಕ್ಷ ಶೇಖರ್ ಯರಗೇರಿ, ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ, ಗುತ್ತಿಗೆದಾರರಾದ ಸತೀಶ ಹೆಗಡೆ,ರಿಗನ್ ಡಿಸೋಜಾ,ಗೋಪಾಲಕೃಷ್ಣ ಕರುಮನೆ,ಮಕಬುಲ್ ಸೈಯ್ಯದ್ ಅಲಿ ಮುಂತಾದವರು ಉಪಸ್ಥಿತರಿದ್ದರು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬೇಡ್ತಿ-ಅಘನಾಶನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ವೃಕ್ಷಾಪರೋಪಣ ಹಸಿರು ಸಮಾರಂಭ.

ಕೇಬಲ್ ನಾಗೇಶ್, ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ:  ಸರ್ಕಾರಕ್ಕೆ  ಬೇಡ್ತಿ ಯೋಜನೆ ಮಾಡುವುದಕ್ಕೆ ಬಹಳ ಅವಸರ ಮತ್ತು ಆಸಕ್ತಿ. ಆದ್ದರಿಂದ ನದಿ …

Leave a Reply

Your email address will not be published. Required fields are marked *