

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಬೇಕು. 18 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಯಾವುದೇ ಹೋಟೆಲ್ ಮತ್ತು ಕಾರ್ಕಾನೆಗಳಲ್ಲಿ ಕೂಡ ಕೆಲಸ ಮಾಡುತ್ತಿರುವ ಮಕ್ಕಳು ಕಂಡರೆ ಈ ಕುರಿತು ಸಂಬಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಿವಿಲ್ ನ್ಯಾಯಾಧೀಶೆ ಲಕ್ಷ್ಮಿಬಾಯಿ ಬಸನಗೌಡ ಪಾಟೀಲ್ ಹೇಳಿದರು.

ಅವರು ಪಟ್ಟಣದ ವೈ.ಟಿ.ಎಸ್.ಎಸ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾ ಪಂಚಾಯತ್, ಅಭಿಯೋಜನಾ ಇಲಾಖೆ ಮತ್ತಿತರ ಇಲಾಖೆಗಳು ಹಾಗೂ ವೈ.ಟಿ.ಎಸ್.ಎಸ್ ಯಲ್ಲಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಅಧ್ಯಕ್ಷತೆ ವಹಿಸಿದ್ದರು.
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ನ್ಯಾಯವಾದಿ ವಿ.ಟಿ.ಭಟ್ಟ ಉಪನ್ಯಾಸ ನೀಡಿದರು. ತಾಲೂಕಾ ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್ಟ, ಸಹಾಯಕ ಸರ್ಕಾರಿ ಅಭಿಯೋಜಕಿ ಝೀನತ್ ಬಾನು ಶೇಖ್, ಬಿ.ಇ.ಓ ಎನ್.ಆರ್.ಹೆಗಡೆ, ಸಿ.ಡಿ.ಪಿ.ಓ ರಫೀಕಾ ಹಳ್ಳುರು, ಆರಕ್ಷಕ ಇಲಾಖೆಯ ಸುನೀಲ್, ವೈ.ಟಿ.ಎಸ್.ಎಸ್ ಪ್ರಾಂಶುಪಾಲ ಆನಂದ ಹೆಗಡೆ, ಅರೇಕಾಲಿಕ ನ್ಯಾಯಿಕ ಸ್ವಯಂ ಸೇವಕ ಗಣಪತಿ ನಾಯ್ಕ ಉಪಸ್ಥಿತರಿದ್ದರು.


ಅರೆಕಾಲಿಕ ಸ್ವಯಂ ಸೇವಕಿ ವೀಣಾ ಮಾನ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕ ಅಶೋಕ ವಡೆಯರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ವಂದಿಸಿದರು.





Prathidvani Yellapura