Breaking News

ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸುನಿಲ್ ಸುಭಾಷ್ ಗಾವಡೆ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಸೇವೆಯಲಿದ್ದ ಕ್ರಿಯಾಶೀಲ ಮುಖ್ಯಾಧಿಕಾರಿ ಸಂಗನ ಬಸಯ್ಯ ವರ್ಗಾವಣೆಯಾಗಿ ಶಿಗ್ಗಾವಿ ಪುರಸಭೆ ಮುಖ್ಯಾಧಿಕಾರಿಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಸುಭಾಷ್ ಗಾವಡೆ ಬಂದಿದ್ದು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.


ಸುನಿಲ್ ಎಸ್ ಗಾವಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನವರಾಗಿದ್ದು ಈ ಹಿಂದೆ ದಾಂಡೇಲಿ ಯಲ್ಲಿ 10 ವರ್ಷಗಳ ಕಾಲ ಕಿರಿಯ ಆರೋಗ್ಯ ನಿರೀಕ್ಷಕರಾಗಿದ್ದು. 5 ವರ್ಷಗಳ ಕಾಲ ಹೊನ್ನಾವರ ಡೆಪ್ಟೇಷನ್ ಮೇಲೆ ಕರ್ತವ್ಯ ನಿರ್ವಹಿಸಿರುತ್ತಾರೆ. ನಂತರದಲ್ಲಿ ಶಿರಸಿ ನಗರ ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದವರಿಗೆ ಸರ್ಕಾರ ಪದೋನ್ನತಿಗೊಳಿಸಿ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಆದೇಶಿಸಿದೆ.

ಸಂಗನ ಬಸಯ್ಯ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವುದರ ಮೂಲಕ ಕ್ರಿಯಾಶೀಲ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಅವರ ಅವಧಿಯಲ್ಲಿ ನಡೆದ ಯಲ್ಲಾಪುರ ಗ್ರಾಮದೇವಿ ಜಾತ್ರೆ ಅತ್ಯಂತ ಯಶಸ್ವಿಯಾಗುವಲ್ಲಿ ಇವರ ಶ್ರಮವು ಅಡಗಿತ್ತು. ದೇವಿದೇವಸ್ಥಾನ ರಸ್ತೆ ಅಗಲಿಕರಣದಲ್ಲಿ ಶ್ರಮಿಸಿದ್ದರು. ಪ್ರತಿ ತಿಂಗಳ ಮಾಸಿಕ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಕಾನೂನಾತ್ಮಕ ಉತ್ತರ ನೀಡುತ್ತ ಶಿಸ್ತು ಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಸದಸ್ಯರು ಮತ್ತು ಸಿಬ್ಬಂದಿಗಳೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದರು. ಕಚೇರಿಯಲ್ಲಿ ಶಿಸ್ತು ತಂದಿದ್ದರು ಮತ್ತು ವಾಲ್ ಮನ್ ಗಳ ಮೇಲೆ ತೀವ್ರನಿಗಾ ಇರಿಸಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಬಾರದಂತೆ ಅವರೆ ಮಾನಿಟರಿಂಗ್ ಮಾಡುತ್ತಿದ್ದರು. ಪೌರ ಕಾರ್ಮಿಕರೊಂದಿಗೆ ಸ್ನೇಹ ಭಾವದಲ್ಲಿ ಇರುತ್ತಿದ್ದರು. ಮುಂಜಾನೆ ವಾಕಿಂಗ್ ಹೆಸರಿನಲ್ಲಿ ವಾಡ್೯ ಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕಡೆಗೆ ಗಮನ ಹರಿಸುತ್ತಿದ್ದರು. ಒಟ್ಟಿನಲ್ಲಿ ಕ್ರಿಯಾಶೀಲ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಜನಮಾನಸದಲ್ಲಿ ಹೆಸರು ಗಳಿಸಿ ಸರ್ಕಾರಿ ಆದೇಶದಂತೆ ಶಿಗ್ಗಾಂವಿಗೆ ತೆರಳಿದ್ದಾರೆ ಅವರ ಮುಂದಿನ ಕರ್ತವ್ಯ ಜೀವನ ಶುಭವಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *