Breaking News

ಸಾರ್ವಜನಿಕರ ಕೋಟ್ಯಾಂತರ ಹಣ ವ್ಯರ್ಥ ; ಖಾಲಿ ಬಿದ್ದ ಜಲಜೀವನ ಮಿಷನ್ ಟ್ಯಾಂಕುಗಳು.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ತಾಲೂಕಿನ ವಿವಿದೆಡೆಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ “ಮನೆ ಮನೆಗೆ ಗಂಗೆ” ಎಂಬ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಬೇಕಿತ್ತು. ಆದರೆ ದೂರದೃಷ್ಠಿ ಇಲ್ಲದೇ ಮತ್ತು ಯೋಜನೆಯ ಸಾಧಕ ಬಾಧಕಗಳನ್ನು ಅರಿಯದೇ ಕೆಲವೆಡೆ ಯೋಜನೆ ಅನುಷ್ಠಾನಗೊಳಿಸಿ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಜಯಕರ್ನಾಟಕ ಸಂಘಟನೆ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಲೂಕಿನ ಮದನೂರು ಪಂಚಾಯತಿ ಮತ್ತು ಕಿರವತ್ತಿ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಗ್ಯಾನತಾವರೆಕೆರೆ, ಹುಣಸಗೇರಿ ಹಾಗು ಅಲ್ಕೇರಿ ಗೌಳಿವಾಡ ಎಂಬಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಅಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ಸಮುದಾಯದ ವಂತಿಕೆಯಲ್ಲಿ.  ನಿರ್ಮಾಣಗೊಂಡ ಓವರ್‌ಹೆಡ್ ಟ್ಯಾಂಕ್‌ನಲ್ಲಿ ಇಂದಿಗೂ ನೀರು ಶೇಖರಣೆಯಾಗದೇ ಖಾಲಿ ಹೊಡೆಯುತ್ತಿದೆ. ಇದಕ್ಕಾಇ ಕೊರೆಸಿದ ಕೊಳವೆ ಬಾವಿಗಳು ಯಶಸ್ವಿಯಾಗದೇ ನೀರಿನ ಮೂಲವೇ ಇಲ್ಲದಂತಾಗಿ ಜನರಿಗೆ ನೀರಿನ ಅಗತ್ಯತೆ ಪೂರ್ಣಗೊಂಡಿಲ್ಲ.


ಮೊದಲು ನೀರಿನ ಮೂಲ ಹುಡುಕಿಕೊಂಡು ಅದರ ಆಧಾರದಲ್ಲಿ ಓವರ್‌ಹೆಡ್ ಟ್ಯಾಂಕುಗಳನ್ನು ನಿರ್ಮಿಸಬೇಕಿತ್ತೇ ಹೊರತು ಇಲ್ಲದಿರುವ ನೀರಿಗೆ ಟ್ಯಾಂಕ್ ನಿರ್ಮಿಸಿರುವುದು ಯಾವ ಪ್ರಯೋಜನಕ್ಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಇದಕ್ಕಾಗಿ ವ್ಯಯಿಸಿದ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿರುವುದು ದುರಂತವಾಗಿದೆ. ಕೂಡಲೇ ಇದಕ್ಕೊಂದು ಪರಿಹಾರ ಕಂಡುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಯಾಗಿ ಹೊರಹೊಮ್ಮಿದ “ಮನೆ ಮನೆಗೆ ಗಂಗೆ” ಎಂಬ ಜಲಜೀವನ್ ಮಿಷನ್ ಯೋಜನೆ ಸಾರ್ಥಕಗೊಳಿಸಬೇಕಿದೆ ಎಂದು ಸಂಘಟನೆಯ ಪ್ರಮುಖ ವಿಲ್ಸನ್ ಫರ್ನಾಂಡಿಸ್ ಆಗ್ರಹಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *