
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಟಿ.ಎಂ.ಎಸ್ ಬಾರಿ ಸುದ್ದಿಯಲಿದ್ದು ಆಡಳಿತಾಧಿಕಾರಿ ವಜಾಗೊಳಿಸುವಂತೆ ಗುರುವಾರ ರಸ್ತೆ ತಡೆ ನಡೆಸಲಾಗಿತ್ತು. ಶುಕ್ರವಾರ ಮುಂದುವರೆದ ಭಾಗವಾಗಿ ಟಿ.ಎಂ.ಎಸ್ ಮುಂಭಾಗ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿ ಕುಂಬ್ರಿ ನೇತೃತ್ವದಲ್ಲಿ ಹೋರಾಟ ಸಮಿತಿಯ ಪ್ರಮುಖರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ರೈತರ ಜೀವನಾಡಿಯಂತಿರುವ ಟಿ.ಎಂ.ಎಸ್ ಸಂಸ್ಥೆಯ ಕತ್ತು ಹಿಚುಕುವ ಕಾರ್ಯ ಹಿಬಂದಿಯ ಬಾಗಿಲಿನಿಂದ ಆಡಳಿತಾಧಿಕಾರಿ ಮೂಲಕ ಮಾಡುತ್ತಿದ್ದು ಇಂತಹ ಹೇಯ ಕೃತ್ಯ ಎಸಗದಂತೆ ತಡೆಯುವ ಸಲುವಾಗಿ ಎಂತಹ ಹೋರಾಟಕ್ಕು ನಾವು ಸಿದ್ದರಿದ್ದು ಆಡಳಿತಾಧಿಕಾರಿ ವಜಾ ಮಾಡದ ಹೊರತು ಸತ್ಯಾಗ್ರಹ ಕೈ ಬಿಡುವ ಪ್ರಶ್ನೆಯೆ ಇಲ್ಲ ಎಂಬುದು ಸತ್ಯಾಗ್ರಹಿಗಳ ಒಕ್ಕೊರಲ ಮಾತಾಗಿದೆ.
ಹಿರಿಯ ಸಹಕಾರಿ ಪ್ರಮೋದ್ ಹೆಗಡೆ, ವಿಶ್ವದರ್ಶನ ಸಂಸ್ಥೆ ಪ್ರಮುಖ ಹರಿಪ್ರಕಾಶ್ ಕೋಣೆಮನೆ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರಾಘು ಭಟ್ಟ, ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ, ಡಿ ಶಂಕರ ಭಟ್, ಸಿ.ಜಿ.ಹೆಗಡೆ, ಸುಬ್ಬಣ್ಣ ಬೋಳ್ಮನೆ, ವೆಂಕಟರಮಣ ಬೆಳ್ಳಿ, ಕೆ.ಟಿ.ಹೆಗಡೆ ಇನ್ನಿತರ ಪ್ರಮುಖರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಖಿಲಭಾರತ ಹವ್ಯಕ ಸಂಘ, ಕಿಸಾನ್ ಸಂಘ, ಅಡಿಕೆ ವ್ಯಾಪಾರಸ್ಥರ ಸಂಘ, ಬಿಜೆಪಿ ಜಿಲ್ಲಾ ಘಟಕ ಇತರೆ ರೈತ ಪರ ಸಂಘಟನೆಗಳು ಸತ್ಯಾಗ್ರಹ ಕ್ಕೆ ಬೆಂಬಲ ಸೂಚಿಸಿವೆ ಎಂದು ಹೊರಾಟ ಸಮಿತಿ ಪ್ರಮುಖ ಪ್ರಸಾದ್ ಹೆಗಡೆ ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ಗೆ ತಿಳಿಸಿದ್ದಾರೆ.




Prathidvani Yellapura