Breaking News

ಇನ್ಸ್ಟಾಗ್ರಾಂ ಸ್ನೇಹ, ಪ್ರೇಮ, ದೌರ್ಜನ್ಯ ಫೋಕ್ಸೊ ಪ್ರಕರಣ ದಾಖಲಿಸಿದ ಅಪ್ರಾಪ್ತೆ.!!!


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲೊಂದು ಇನ್ಸ್ಟಾಗ್ರಾಂ ಪ್ರೇಮ ಪ್ರಕರಣ ಹುಡುಗನ ಬ್ಲಾಕ್ ಮೇಲ್ ಕಾಟಕ್ಕೆ ಬೇಸತ್ತ ಅಪ್ರಾಪ್ತ ಸಂತ್ರಸ್ತೆ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಶನಿವಾರ ಯಲ್ಲಾಪುರ ಠಾಣೆಯಲ್ಲಿ ನಡೆದಿದೆ.
ಪೆನ್ ಡ್ರೈವ್ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಹೊತ್ತಲ್ಲೆ ಯಲ್ಲಪುರದಲ್ಲೊಂದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಅಪ್ರಾಪ್ತನೊಬ್ಬ ಅಪ್ರಾಪ್ತೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದು ಸಂತ್ರಸ್ಥೆ ನ್ಯಾಯಕ್ಕಾಗಿ ಠಾಣೆಯ ಮೆಟ್ಟಿಲು ಏರಿದ್ದಾಳೆ.


ವಿವರ :- ಪಟ್ಟಣದಲ್ಲಿ ವಾಸವಾಗಿರುವ ಫೋಕ್ಸೋ ಪ್ರಕರಣದ ಸಂತ್ರಸ್ಥೆಗೆ ಇನ್ಸ್ಟಾಗ್ರಾಂ ನಲ್ಲಿ ಹುಡುಗನೊಬ್ಬನ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕೊನೆಗೆ ಪ್ರೇಮವಾಗಿ ಬದಲಾಗಿದೆ. ಇಬ್ಬರು ಸಹ ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ಹುಡುಗ ಹುಡುಗಿಯ ಬಳಿ ಹಣ ನೀಡುವಂತೆ ಪದೇ ಪದೇ ಒತ್ತಾಯಿಸಿದ ಕಾರಣ ಹುಡುಗಿಯು ತನ್ನ ತಾಯಿಯ ಮೊಬೈಲಿನಿಂದ ಹಣ ವರ್ಗಾಯಿಸಿದ್ದಾಳೆ. ಆದರೂ ಸಹ ಸುಮ್ಮನಾಗದ ಹುಡುಗ ಮತ್ತೆ ಮತ್ತೆ ಹಣ ನೀಡುವಂತೆ ಹೆದರಿಸಿ ಬ್ಲಾಕ್‌ಮೇಲ್ ಮಾಡುತ್ತಾ ಮನೆ ಬಳಿ ಬರುವುದು ಮೈ ಕೈ ಮುಟ್ಟುವುದು ಎಷ್ಟೇ ಬೇಡವೆಂದರೂ ವಯಸ್ಸಿನಲ್ಲಿ ಸಣ್ಣವಳೆಂದು ಬೇಡಿಕೊಂಡರೂ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಅಲ್ಲದೇ ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ನಂತರ ಮತ್ತೆ ಸಂತ್ರಸ್ಥೆ ಓದುವ ಕಾಲೇಜು ಹಾಗೂ ಇನ್ನಿತರ ಕಡೆಗಳಲ್ಲಿ ಹಣಕ್ಕಾಗಿ ಪೀಡಿಸುತ್ತಾ ಹಣ ನೀಡಲು ಆಗದಿದ್ದರೆ ವೀಡಿಯೋ ಕಳುಹಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಹೆದರಿದ ಸಂತ್ರಸ್ಥೆ ವೀಡಿಯೋ ಮಾಡಿ ಆತನ ವಾಟ್ಸಪ್‌ಗೆ ಕಳುಹಿಸುವ ಗಡಿಬಿಡಿಯಲ್ಲಿ ಆಕೆಯ ವಾಟ್ಸಪ್ ಸ್ಟೇಟಸ್‌ಗೆ ಅಪ್‌ಲೋಡ್ ಆಗುತ್ತದೆ. ಇದನ್ನು ಕುಟುಂಬದ ಆಪ್ತರೊಬ್ಬರು ನೋಡಿದ ಮೇಲೆ ಪ್ರಕರಣ ಬಯಲಿಗೆ ಬಂದಿದೆ. ನಂತರ ಯಲ್ಲಾಪುರ ಠಾಣೆಗೆ ಬಂದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *