Breaking News

ವಿಶ್ವ ದರ್ಶನ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂದಿಸಿ‌ ಆಸ್ಪತ್ರೆ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ತುಂಬಾ ವಿದ್ಯಾರ್ಥಿಗಳ ಕಲರವ ಜೋರಾಗಿತ್ತು.

ಸುದ್ದಿಯ ವಿಡಿಯೋ ನೋಡಬೇಕಾ ಹಾಗಾದರೆ ಇಲ್ಲಿ ಕ್ಲಿಕ್ ಮಾಡಿ


ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 9 ನೆ ತರಗತಿ ಪಠ್ಯದಲ್ಲಿನ ವಿಷಯಕ್ಕೆ ಸಂಬಂಧಿಸಿದಂತೆ ಕ್ಲಾಸ್ ರೂಮಿನಲ್ಲಿ ಪಾಠ ಹೇಳುವುದರ ಜೊತೆಯಲ್ಲಿ ಅದೇ ವಿಷಯವನ್ನು ಆಸ್ಪತ್ರೆಯಲ್ಲಿ ಅದರಲ್ಲು ವೈಧ್ಯರ ಕಡೆಯಿಂದ ನೇರವಾಗಿ ವಿವರಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳು ಅರ್ಥೈಸಬಲ್ಲರೆಂದು ಸುಮಾರು 70 ವಿದ್ಯಾರ್ಥಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು.


‌‌‌‌‌‌ ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರಾದ ಡಾ,ದೀಪಕ್ ಭಟ್ ಮತ್ತು ಡಾ, ಸೌಮ್ಯ ದೀಪಕ್ ಭಟ್ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಮುಟ್ಟುವಂತೆ ವಿಷಯವನ್ನು ವಿವರಿಸಿದರು ಹಾಗು ರಕ್ತ ಪರೀಕ್ಷಿಸುವ ಸಾಧನವನ್ನು ವಿದ್ಯಾರ್ಥಿಗಳೆ ನೋಡುವುದಕ್ಕು ಅವಕಾಶ ಕಲ್ಪಿಸಿದರು.


ವಿದ್ಯಾರ್ಥಿಗಳ ಜೊತೆಯಲ್ಲಿ ಶಾಲೆಯ ಶಿಕ್ಷಕರು ಇತರೆ ಸಿಬ್ಬಂದಿಗಳು ಆಗಮಿಸಿದ್ದರು ಆಸ್ಪತ್ರೆ ಲ್ಯಾಬ್ ಸಿಬ್ಬಂದಿಗಳಾದ ರಾಘು , ಮಾಲತೇಶ್, ಗಣೇಶ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಹಕರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *