
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಡಿ.12 ರಂದು ಶಿರಸಿಯಲ್ಲಿ ನಡೆದ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕ ವಿನೋದ ಭಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವಿನೋದ್ ಭಟ್ ಉತ್ತಮ ವಾಗ್ಮಿಯಾಗಿದ್ದು ಹಲವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಳುಗರ ಆಪ್ತರೆನಿಸಿದ್ದಾರೆ. ಹಲವು ಪ್ರತಿಷ್ಟಿತ ವೇದಿಕೆ ಕಾರ್ಯಕ್ರಮಗಳಲ್ಲಿ ಉತ್ತಮ ನಿರೂಪಣೆಯೊಂದಿಗೆ ಗಮನಸೆಳೆದಿದ್ದಾರೆ. ಇಂತಹ ಬಹುಮುಖ ಪ್ರತಿಭೆಯ ಶಿಕ್ಷಕ ವಿನೋದ್ ಭಟ್ ಅವರು ಆಶುಭಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.




Prathidvani Yellapura