Breaking News

ತಾಲೂಕು ಆಡಳಿತ ಸೌಧದ ಮುಂಬಾಗ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಲು ಸಮಿತಿ ರಚನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಕೆ.ಬಿ.ರಸ್ತೆ ಬಳ್ಳಾರಿ – ಕಾರವಾರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಹೆ ನಿರ್ಮಾಣಗೊಂಡು ಜ‌ನರಿಗೆ ಸೇವೆ ನೀಡುತ್ತಿರುವ ತಾಲೂಕು ಆಡಳಿತ ಸೌಧದ ಮುಂಬಾಗದಲ್ಲಿ ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನೆ ಅರ್ಥಪೂರ್ಣವಾದ ಕಾರ್ಯವಾಗಿದ್ದು. ಅದಕ್ಕಾಗಿ ಆಗ್ರಹಿಸಿ ಹೋರಾಟ ಮಾಡುವ ಸಲುವಾಗಿ ವಿವಿಧ ಸಂಘಟನೆಗಳ ಪ್ರಮುಖರು ಯಲ್ಲಾಪುರದ ಲೊಕೊಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಸಭೆಸೇರಿ ಮೂರ್ತಿ ಸ್ಥಾಪನೆಗೆ ಆಗ್ರಹಿಸಲು ಸರ್ವಾನುಮತದಿಂದ ಸಮಿತಿ ರಚಿಸಲಾಯಿತು.


ಸಮಿತಿ ಗೌರವಾಧ್ಯಕ್ಷರಾಗಿ ಜಗನ್ನಾಥ ರೇವಣಕರ್, ಅಧ್ಯಕ್ಷರಾಗಿ ಮಾರುತಿ ಬಿ ವಡ್ಡರ್, ಉಪಾಧ್ಯಕ್ಷರಾಗಿ ಕಲ್ಲಪ್ಪ ಹೊಳಿ, ಅಶೋಕ್ ಕೊರವರ್, ಸಂಚಾಲಕರಾಗಿ ನಾಗೇಶ್ ಕುಮಾರ್.ಎನ್ , ಕಾರ್ಯದರ್ಶಿ ‌ಯಾಗಿ ಸಂತೋಷ್ ಪಾಟಣ್ಕರ್, ಸಹಕಾರ್ಯಶಿ ತೋಳರಾಮ್ ಜಿ ಅತ್ತರವಾಲ ಮಾರ್ಗದರ್ಶಕರಾಗಿ ಬೆನಿತ್ ಸಿದ್ದಿ ಅವರನ್ನು ಹಾಗು 29 ಕ್ಕು ಅಧಿಕ ಸಂಖ್ಯೆಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.


ನಂತರ ಸಭೆಯಲ್ಲಿ ಮಾ,15 ರಂದು ಶುಕ್ರವಾರ 12 ಗಂಟೆಗೆ  ಮೂರ್ತಿ ಪ್ರತಿಷ್ಟಾಪನೆಗೆ ಆಗ್ರಹಿಸಿ ಶಾಸಕರಿಗೆ ತಹಶಿಲ್ದಾರರಿಗೆ, ಹಾಗು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *