Breaking News

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯಿಂದ ಶಿವಶಂಕರ ನಿಲಯದಲ್ಲಿ ಇಂದು ” ಪುಸ್ತಕ ಅವಲೋಕನ ” ಕವಿಗೋಷ್ಟಿ


ಪ್ರತಿಧ್ವನಿ ಯಲ್ಲಾಪುರ : ಜಿಲ್ಲೆಯಲ್ಲಿ ಕ್ರಿಯಾಶೀಲ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ನಡೆಸಿಕೊಂಡು ಬರುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷೆ ಶಿಕ್ಷಕಿ ಲೇಖಕಿ ಶಿವಲೀಲಾ ಹುಣಸಗಿ ಅವರ ಶಿವಶಂಕರ ನಿವಾಸದಲ್ಲಿ ” ನನ್ನ ಪುಸ್ತಕದ ಅವಲೋಕನ ಕಾರ್ಯಕ್ರಮ ಮತ್ತು ಕವಿಗೋಷ್ಟಿ/ಉಪನ್ಯಾಸ ” ಕಾರ್ಯಕ್ರಮ ಮದ್ಯಾಹ್ನ 3 ಗಂಟೆಗೆ ಜರುಗಲಿದೆ.

ಖ್ಯಾತ ಇತಿಹಾಸ ತಜ್ಞ ಡಾ.ಲಕ್ಷ್ಮೀಷ ಸೋಂದ,ಹಿರಿಯ ಸಾಹಿತಿ ಬೀರಣ್ಣ ನಾಯಕ ಮೊಗಟ, ಲೇಖಕ ಡಾ,ನವೀನ್ ಕುಮಾರ್ ಉಪನ್ಯಾಸ ನೀಡಲಿದ್ದು ಪವಿತ್ರ ಅಗೇರ್ ಮತ್ತು ಮಂಜುನಾಥ ಪಟಗಾರ ಪುಸ್ತಕ ಅವಲೋಕನ ಮಾಡಲಿದ್ದಾರೆ.
ಕಾರ್ಯಕ್ರಮವನ್ನು ಯಲ್ಲಾಪುರದ ಪ್ರಥಮಧರ್ಜೆ ಕಾಲೇಜು ಪ್ರಾಂಶುಪಾಲ ಡಾ,ಆರ್.ಡಿ.ಜನಾರ್ಧನ ಉದ್ಘಾಟಿಸಲಿದ್ದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷೆ ಶಿಕ್ಷಕಿ/ಲೇಖಕಿ ಶಿವಲೀಲ ಹುಣಸಗಿ ಅಧ್ಯಕ್ಷತೆ ವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಿನ ಕವಿಗಳಿಂದ ” ಮಹಿಳೆ ” ಎಂಬ ವಿಷಯದ ಮೇಲೆ ಕವಿಗೋಷ್ಟಿ ಜರುಗಲಿದೆ.
ಈ ಎಲ್ಲಾ ಸಾತ್ವಿಕ ಸಾಹಿತ್ಯಾತ್ಮಕ ಕನ್ನಡ ಪ್ರೇಮದ ಕಾರ್ಯಕ್ರಮಕ್ಕೆ ಸಾಹಿತ್ಯ ಪ್ರೇಮಿಗಳು ಆಗಮಿಸಬೇಕೆಂದು ಸಂಘಟನೆ ಶ್ರದ್ದೆಯಿಂದ ಕರೆ ನೀಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *