ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ-ಪಟ್ಟಣದ ತಹಶಿಲ್ದಾರ್ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೆಬ್ ಅಂಬೇಡ್ಕರ್ ಜಯಂತಿ ಹಾಗು ಬಾಬು ಜಗಜೀವನರಾಮ್ ಆಚರಿಸಲಾಯಿತು.

ಭೂ ಮಂಡಲದಲ್ಲಿ ಸೂರ್ಯ ಚಂದ್ರ ಇರೋವರೆಗು ಭಾರತದ ಮಹಾನ್ ಚೇತನ ಅಂಬೇಡ್ಕರ್ ಅವರ ಹೆಸರು ವಿಚಾರ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ತಹಶಿಲ್ದಾರ ಗುರುರಾಜ್ ಹೇಳಿದರು.

ಜಗತ್ತಿನ ಮಹಾನ್ ನಾಯಕರ ಜಯಂತಿ ಆಚರಿಸುವುದರೊಂದಿಗೆ ಅವರ ತತ್ವ ಆದರ್ಶಗಳನ್ನು ಪಾಲಿಸಬೇಕಿದೆ. ಮತ್ತು ಪ್ರಸ್ತುತ ಸಮಜಕ್ಕೆ ಅವರ ಮಾರ್ಗದರ್ಶನ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಶಿಕ್ಷಕ ಡಾ,ನವೀನ್ ಕುಮಾರ್ ಉಪನ್ಯಾಸ ನೀಡಿದರು.

ತಾಲೂಕು ಪಂಚಾಯತ್ ಕರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸಂಗನಬಸಯ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ವಿವಿಧ ಇಲಾಖೆಗಳ ಪ್ರಮುಖರು ಸಂಘ ಸಂಸ್ಥೆಗಳು ಹಾಗು ಸಾರ್ವಜನಿಕರು ಉಪಸ್ಥಿತರಿದ್ದರು.




Prathidvani Yellapura