Breaking News

ಕಿರವತ್ತಿಯಲ್ಲಿ ಅಧಿಕೃತವಾಗಿ  ಉದ್ಘಾಟನೆಗೊಂಡ  ಪೊಲೀಸ್ ಉಪಠಾಣೆ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಕಿರವತ್ತಿ ಅತಿ ದೊಡ್ಡ ಪಂಚಾಯತವಾಗಿದ್ದು ವಿಶಾಲವಾದ ಭೂ ವ್ಯಾಪ್ತಿ ಹೊಂದಿದೆ. ಪಟ್ಟಣದಿಂದ 20 ಕಿಲೋಮೀಟರ್ ದೂರವಿದ್ದು ಇಲ್ಲಿಯೆ ಒಂದು ಪೊಲೀಸ್ ಉಪಠಾಣೆ ಇದ್ದರೆ ಸಾರ್ವಜನಿಕರಿಗೆ ಕಾನೂನು ಸುವ್ಯವಸ್ಥೆ ಬಲಪಡಿಸಲು ಹಾಗು ಸಾರ್ವಜನಿಕರಿಗೆ ಸೇವೆ ತ್ವರಿತವಾಗಿ ತಲುಪಲು ಸಾದ್ಯವಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಅವರು ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ನೂತನ ಪೋಲಿಸ್ ಉಪಠಾಣೆಯನ್ನು ಉದ್ಘಾಟಿಸಿ  ಮಾತನಾಡಿದರು.

ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಪೊಲೀಸ್ ಸೇವೆ ಲಭ್ಯವಾಗುವಂತೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕಿರವತ್ತಿ, ಮದನೂರ ಪ್ರದೇಶದ ಜನರ ಬಹುಕಾಲದ ಬೇಡಿಕೆಯಾಗಿದ್ದ ಪೋಲಿಸ್ ಠಾಣೆ ಇಂದು ಕಾರ್ಯರೂಪಕ್ಕೆ ಬಂದಿರುವುದು ಸಂತೋಷದ ವಿಷಯವೆಂದು ಅವರು ಹೇಳಿದರು. ಸಾರ್ವಜನಿಕರು ಕಾನೂನು ಪಾಲನೆಗೆ ಸಹಕರಿಸಿ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ  ಉಪಠಾಣೆ ಅನುಷ್ಟಾನವಾಗುವಲ್ಲಿ ಸರ್ಕಾರ ಮಟ್ಟದಲ್ಲಿ ನಿರಂತರ ಪ್ರಯತ್ನಿಸಿ ಯಶಸ್ವಿಯಾಗಿಸಿದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ವತಿಯಿಂದ ಗೌರವಿಸಿ ಸನ್ಮನಿಸಲಾಯಿತು.

ಡಿ.ವೈ.ಎಸ್.ಪಿ ಗೀತಾ ಪಾಟೀಲ್, ಕಿರವತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಮಿರಾಶಿ, ಪ್ರಮುಖರಾದ ರಾಘವೇಂದ್ರ ಗೊಂದಿ,  ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ನಾಡುಕಂಡ ಹಿರಿಯ ಮತ್ತು ಶ್ರೇಷ್ಠ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರ ಜನುಮ ದಿನಕ್ಕೆ ಶುಭ ಕೋರಿದ ಅತ್ಯಾಪ್ತ  ಬಾಬು ಸಿದ್ದಿ ಮತ್ತು ತಂಡ.

ಪ್ರತಿಧ್ವನಿ ಯಲ್ಲಾಪುರ : ನಾಡಿನ ಹಿರಿಯ ಮತ್ತು ಶ್ರೇಷ್ಠ ರಾಜಕಾರಣಿ ಹಳಿಯಾಳ ಕ್ಷೇತ್ರದ ಶಾಸಕ ಮಾಜಿ ಮಂತ್ರಿ ಹಾಲಿ ಆಡಳಿತ …

Leave a Reply

Your email address will not be published. Required fields are marked *