
ಪ್ರತಿಧ್ವನಿ ಯಲ್ಲಾಪುರ : ನಮ್ಮ ದೇಶ, ಸಂಸ್ಕಾರ ಸಂಸ್ಕೃತಿ, ಇವೆಲ್ಲವೂ ನಮಗೆ ಹಿರಿಯರು ನೀಡಿದ ಬದುಕಿನ ಕ್ರಮವಾಗಿದೆ. ಸ್ವಾತಂತ್ರ್ಯ ಎಂದರೆ ಗುಲಾಮಗಿರಿಯಿಂದ ಇಂದಿನ ಸ್ವತಂತ್ರವನ್ನು ಕೊಡಿಸಿದ ಕ್ಷಣ. ಈ ಬದುಕನ್ನು ನೀಡಿದ ಮಹನೀಯರು ಪ್ರಾತಸ್ಮರಣೀಯರು. ಅಂದಿನ ಹಿರಿಯ ತಲೆಮಾರಿನ ಜನ ಒಗ್ಗಟ್ಟಿನಿಂದ ನೀಡಿರುವ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತೇವೆ. ಈ ಸ್ವಾತಂತ್ರ್ಯದ ಸವಿ ಅತ್ಯಂತ ಅಮೂಲ್ಯ ಅದನ್ನ ಪಡೆಯಬೇಕಾದರೆ ನಡೆಸಿದ ಹೋರಾಟಗಳ ಅರಿವಿಲ್ಲದೆ ನಾವಿಂದು ದೇಶದ ಬಗ್ಗೆ ದೇಶದ ಕುರಿತು ಚಿಂತನೆ ಮಾಡುವಲ್ಲಿ ಎಡವುತ್ತಿದ್ದೇವೆ ಎಂದು ಹೋಲಿ ರೋಜರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎಂ. ರಾಜಶೇಖರ್ ಹೇಳಿದರು.
ಅವರು 80 ನೆ ಸ್ವಾತಂತ್ರೋತ್ಸವದ ನಿಮಿತ್ತ ಹೋಲಿರೋಜರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಜಂಟಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಎಳೆಯ ಮನಸ್ಸಿನ ಮಕ್ಕಳಲ್ಲಿ ಸುಭದ್ರ ಸಮಷ್ಟಿ ಭಾವದ ರಾಷ್ಟ್ರದ ಕಲ್ಪನೆ ಅತ್ಯಂತ ಅಮೂಲ್ಯ. ನನ್ನ ದೇಶ ನನಗೇನು ನೀಡಿದೆ ಎನ್ನುವುದನ್ನು ಯೋಚಿಸುವುದಕ್ಕಿಂತ ದೇಶಕ್ಕಾಗಿ ನಾನೇನು ಮಾಡಬಲ್ಲೆ, ಎನ್ನುವುದನ್ನು ಯೋಚಿಸಿಸುವ ಸ್ಥಿತಿ ಇಂದು ನಮ್ಮ ಮುಂದಿದೆ ಎಂದರು.
ಸ್ವಾತಂತ್ರ್ಯಕ್ಕೂ ಸ್ವೇಚ್ಛಾಚಾರಕ್ಕೂ ಇರುವ ವ್ಯತ್ಯಾಸವನ್ನು ಅರಿತು ನಾವು ದೇಶವನ್ನು ಕಟ್ಟಬೇಕಾಗಿದೆ.
ಈ ಸಂದರ್ಭದಲ್ಲಿ ಎರಡು ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಿರಿಯ ನಿವೃತ್ತ ಶಿಕ್ಷಕರಾದ ದಾಸಿಂತ್ ಫರ್ನಾಂಡಿಸ್ ಚಂದ್ರಶೇಖರ್ ರವರು ಆಗಮಿಸಿ ಧ್ವಜವಂದನೆಯಲ್ಲಿ ಭಾಗವಹಿಸಿದರು ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾ ಕ ಆಗ್ನೇಯಲ್ ಫರ್ನಾಂಡಿಸ್ ವಂದಿಸಿದರು. ಸ್ವಾತಂತ್ರ್ಯೋತ್ಸವದ ನಿಮಿತ್ತ ನಡೆಸಿದ ದೇಶಭಕ್ತಿ ಗೀತೆ ಚಿತ್ರಕಲಾ ಸ್ಪರ್ಧೆ ಇನ್ನಿತರ ಹಲವು ಸ್ಪರ್ಧಿಗಳ ಬಹುಮಾನಗಳನ್ನ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಯಿತು ವಿಶ್ವ ದರ್ಶನ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಸಹ ಉಪಸ್ಥಿತರಿದ್ದರು ಹಿರಿಯ ಶಿಕ್ಷಕರ ವೆಂಕಟರಮಣ ಭಟ್ಟ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ನೆಲ್ಸನ್ ಗೋನ್ಸಾಲ್ವಿಸ ಮತ್ತು ಮಲ್ಲಿಕಾರ್ಜುನ ದೇಶಭಕ್ತಿ ಗೀತೆಗಳನ್ನು ನಿರ್ವಹಿಸಿದರು.

















Prathidvani Yellapura