Breaking News

ಸುರಭಿ ಸೇವಾ ಚಾರಿಟಬಲ್ ಟ್ರಸ್ಟ್ ಯಲ್ಲಾಪುರ ಮಹಿಳಾ ಘಟಕದಿಂದ ಕೃಷ್ಣ ವೇಷ ಸ್ಪರ್ಧೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕೋಟೆ ಕರಿಯಮ್ಮ ದೇವಸ್ಥಾನದ ಆವರಣದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಧಾ-ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು.

ಪಟ್ಟಣ ವ್ಯಾಪ್ತಿಯ ಪುಟಾಣಿಗಳು ಮುದ್ದಾದ ರಾಧೆ ಹಾಗೂ ಕೃಷ್ಣ ವೇಷ ತೊಟ್ಟು ಸ್ಪರ್ಧೆಯಲ್ಲಿ ಪಾಲ್ಗೊಂಡು ನೋಡುಗರನ್ನು ರಂಜಿಸಿದರು.


ಮಾಸ್ಟರ್ ಆರ್ಟ್ಸ್ ಮಾಲೀಕ ಮಹೇಶ್ ಆಲ್ಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸುರಭಿ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟಣಕರ, ಕಾರ್ಯದರ್ಶಿ ಮಾಲಾ ಬಾಲೆಹೊಸೂರು, ಲಕ್ಷ್ಮೀ ಮರಾಠಿ ಉಪಸ್ಥಿತರಿದ್ದರು.

ಪವಿತ್ರ ಪ್ರಾರ್ಥಿಸಿದರು. ಡಿಂಪಲ್ ಅಲಗೇರಿ ಸ್ವಾಗತಿಸಿದರು. ಸ್ಮಿತಾ ಥೋರಸ್ಕರ ಕಾರ್ಯಕ್ರಮ ನಿರ್ವಹಿಸಿದರು. ಸಾಕ್ಷಿ ಮುರ್ಕುಂಬಿ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ  ಆಚರಣೆ.

ಪ್ರತಿಧ್ವನಿ ಯಲ್ಲಾಪುರ :  14.4.2026 ರಂದು ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.    …

Leave a Reply

Your email address will not be published. Required fields are marked *