Breaking News

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕಳೆದ 32 ವರ್ಷಗಳಿಂದ ಗಣೇಶ ಚತುರ್ಥಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತ ಬಂದಿದ್ದಾರೆ.


ವಿಶೇಷವೆಂದರೆ ಕಳೆದ ಅನೇಕ ವರ್ಷಗಳಿಂದ ಶಿರಸಿ ಕೆ.ಹೆಚ್.ಬಿ ಕಾಲೋನಿ ನಿವಾಸಿ ಶ್ರೀಧರ ಸಂಜೀವ ಕೆರೆಕರ ಈತನು ಮುತ್ತು ಹವಳಗಳಿಂದ ಅಲಂಕೃತಗೊಂಡ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ ನೀಡುತ್ತ ಬಂದಿದ್ದು ಈ ವರ್ಷ ಆಮೆಯ ಮೇಲೆ ಕುಳಿತಿರುವ ಪಾಂಡುರಂಗ ವಿಠಲ ಶೈಲಿಯ ಉತ್ಸವ ಗಣೇಶ ಮೂರ್ತಿಯನ್ನು ತಯಾರಿಸಿದ್ದು, ಈತನ ಕಲೆಯನ್ನು ಪ್ರೋತ್ಸಾಹಿಸಲು ಕಛೇರಿಯ ಅಧಿಕಾರಿಗಳಾದ  ಅಶೋಕ ಬಿ. ಬಂಟ್-ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್ ಉಪ ವಿಭಾಗ, ಯೋಜನಾ ಉಪ ವಿಭಾಗ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಇಲಾಖೆ ಸಿಬ್ಬಂದಿಗಳು ಸೇರಿ ಈತ ತಯಾರಿಸಿದ ಗಣೇಶನ ಮೂರ್ತಿಯನ್ನು ಕಛೇರಿಯಲ್ಲಿ ಪ್ರತಿಷ್ಠಾಪಿಸಲು ನಿರ್ಣಯಿಸಿ ಗಣೇಶನ ಮೂರ್ತಿಯನ್ನು ಸೆಪ್ಟೆಂಬರ್ 14 ರಂದು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಯಿತು.

ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಗುತ್ತಿಗೆದಾರರು ಸೇರಿ ವಿಜೃಂಭಣೆಯಿಂದ ಗಣೇಶ ಚತುರ್ಥಿ ಆಚರಿಸುತ್ತಿದ್ದು, ಶ್ರೀಮತಿ ಶಶಿಕಲಾ ಸಂತೋಷ ಬಾಂದಿವಾಡೇಕರ, ಬೆಳಗಾವಿ ಇವರು ಮಾಡಿರುವ ಪಾಂಡುರಂಗ ವಿಠಲ ಮಂದಿರದ ಗರ್ಭಗುಡಿ ಹೋಲುವ ಮಂಟಪದ ಅಲಂಕಾರ ವಿಶೇಷವಾಗಿದೆ.

ನಾಲ್ಕನೇ ದಿನ ಗುರುವಾರ ಮಹಾಪೂಜೆ ಪ್ರಸಾದ ಭೋಜನ ವಿತರಣೆ, ನಂತರ ಸಂಜೆ 6.45 ಗಂಟೆಗೆ ನುರಿತ ಕಲಾವಿದರಿಂದ “ಶರಸೇತು ಬಂಧನ ತಾಳಮದ್ದಳೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೂ ಐದನೇ ದಿನ ಶುಕ್ರವಾರದಂದು ಮಂಗಳಮೂರ್ತಿಯನ್ನು ಜಾಂಜ್ ವಾದ್ಯದ ಭವ್ಯ ಮೆರವಣಿಗೆಯೊಂದಿಗೆ ವಿಸರ್ಜಿಸಲಾಗುತ್ತದೆ ಎಂದು ಕಚೇರಿ ಮೂಲಗಳಿಂದ ತಿಳಿದು ಬಂದಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಕಟ್ಟಿಗೆ ಡಿಪೋ ಸಾರ್ವಜನಿಕ ಗಜಾನನೋತ್ಸವ ಸಮಿತಿ ಆವಾರದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮ ಆಯೋಜನೆ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕಟ್ಟಿಗೆ ಡಿಪೋ “ಸಾರ್ವಜನಿಕ ಶ್ರೀ ಗಜಾನನೋತ್ಸವ ಸಮಿತಿ ” ಆವಾರದಲ್ಲಿ ಪ್ರಸಕ್ತ ವರ್ಷ ಚೌತಿ …

Leave a Reply

Your email address will not be published. Required fields are marked *