
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ವಿದ್ಯಾರ್ಥಿ ದೆಸೆಯಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಏ.15 ರಂದು ಮುಕ್ತಾಯಗೊಂಡಿದೆ.

ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಿದ್ದು ಮಾ.31 ರಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದಂತೆ ಏ.15 ರಂದು ಮುಕ್ತಾಯ ಕಂಡಿದೆ.

ಕೊನೆಯ ದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯಿದ್ದು ಎಲ್ಲಾ ಕೇಂದ್ರಗಳಲ್ಲೂ ಸಂಪೂರ್ಣ ಹಾಜರಾತಿ ಇದ್ದು ಯಶಸ್ವಿ ಮುಕ್ತಾಯ ಕಂಡಿದೆ.
ಯಲ್ಲಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ತಾಲ್ಲೂಕಿನ ವಿದ್ಯಾಕಾಶಿ ಎಂದೇ ಪ್ರಖ್ಯಾತಿ ಪಡೆದ ವೈಟಿಎಸ್ಎಸ್ ವಿದ್ಯಾಸಂಸ್ಥೆ ಯಲ್ಲಿ ಪರೀಕ್ಷೆ ಬರೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಸಂತಸ ಸಂಭ್ರಮದಿ ಮನೆಯ ಕಡೆಗೆ ಹೆಜ್ಜೆ ಹಾಕಿದರು. ಜೊತೆಗೆ ಮಕ್ಕಳನ್ನು ಕರೆದುಕೊಂಡು ಹೋಗಲು ಪೋಷಕರು ಸಹ ಕಾಯುತ್ತಿರುವುದು ಸಾಮನ್ಯವಾಗಿತ್ತು




Prathidvani Yellapura