Breaking News

ಮದನೂರು ಪಂಚಾಯತ್ ಅಧ್ಯಕ್ಷರ ವಿರುದ್ದ ಅವಿಶ್ವಾಸಕ್ಕೆ ಹೈ ಕೋಟ್೯ ತಡೆ.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮದನೂರು ಗ್ರಾಮಪಂಚಾಯತದಲ್ಲಿ ಮಂಗಳವಾರ ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಲಾಗಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅವಿಶ್ವಾಸ ಮಂಡನೆ ಅರ್ಧಕ್ಕೆ ಕೈ ಬಿಟ್ಟ ಘಟನೆ ನಡೆದಿದೆ.


ಮದನೂರು ಗ್ರಾಮ ಪಂಚಾಯತ ಒಟ್ಟು 13 ಸದಸ್ಯ ಬಲ ಹೊಂದಿದ್ದು ಸದ್ಯ ರಾಜೇಶ ಗಣಪತಿ ತಿನೇಕರ್ ಅಧ್ಯಕ್ಷ ಸ್ಥಾನದಲ್ಲಿದ್ದು ಅವರ ಮೇಲೆ ಅವಿಶ್ವಾಸ ಮಂಡನೆಗೆ 10 ಸದಸ್ಯರ ತಂಡ ಸಿದ್ಧವಾಗಿತ್ತು. ಈ ಮೊದಲೇ ಅವಿಶ್ವಾಸ ಮಂಡನೆಗೆ ಮೇ 14 ರಂದು ದಿನ ನಿಗದಿಯಾದಂತೆ ಚುನಾವಣಾಧಿಕಾರಿಯಾಗಿ ಶಿರಸಿ ಉಪವಿಭಾಗಾಧಿಕಾರಿ ಅನುಪಮಾ ರಮೇಶ ಪ್ರಕ್ರಿಯೆ ಕೈಗೊಂಡಿದ್ದರು. ಈ ವೇಳೆಗೆ ಹಾಜರಿದ್ದ ಸದಸ್ಯರಲ್ಲಿ 10 ಜನ ಸದಸ್ಯರು ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಕೈ ಎತ್ತಿ ಸಮ್ಮತಿ ಸೂಚಿಸಿದ್ದರು. ಆದರೆ ಆ ವೇಳೆಗಾಗಲೇ ರಾಜ್ಯದ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದೆ ಎಂದು ದೂರವಾಣಿ ಕರೆಬಂದ ಕಾರಣ ಅವಿಶ್ವಾಸ ಗೊತ್ತುವಳಿಯ ಚಿತ್ರಣವೇ ಬದಲಾಯಿತು.


ಚುನಾವಣಾ ಅಧಿಕಾರಿಯಾಗಿ ಪ್ರಕ್ರಿಯೆಗೆ ಮುಂದಾದ ಶಿರಸಿ ಉಪ ವಿಭಾಗಾಧಿಕಾರಿ ಮೇಲಾಧಿಕಾರಿಗಳ ಸಲಹೆ ಪಡೆದು ಅವಿಶ್ವಾಸವನ್ನು ರದ್ದುಗೊಳಿಸಿ ಠರಾವು ಬರೆದರು. ಈ ಹಿಂದೆ ಬಿಜೆಪಿ ಬೆಂಬಲದಿಂದ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಮದನೂರು ಪಂಚಾಯತ ಅಧ್ಯಕ್ಷ ರಾಜೇಶ್ ಕೆಳಗಿಳಿಸಲು ಸಿದ್ದತೆ ಪ್ರಾರಂಭವಾಗಿತ್ತು. ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಲೇ ಈ ಕಾರ್ಯಕ್ಕೆ ಮತ್ತಷ್ಟು ವೇಗ ಪಡೆಯಿತು.


    ಬಿಜೆಪಿ ಬೆಂಬಲದಿಂದ ಅಧ್ಯಕ್ಷ ಸ್ಥಾನದಲ್ಲಿ ಕುಳಿತ ವ್ಯಕ್ತಿಯನ್ನು ಕೆಳಗಿಳಿಸಲು 1೦ ಸದಸ್ಯರ ತಂಡ ಸಿದ್ಧವಾಗಿ ತೆರೆಮರೆಯಲ್ಲಿ ಬಿಜೆಪಿ ನಾಯಕರ ಕಸರತ್ತು ಅದಕ್ಕೆ ವಿರುದ್ಧ ತಯಾರಿಯಲ್ಲಿ ಕಾಂಗ್ರೆಸ್ಸಿನ ಕರಾಮತ್ತು ಅವಿಶ್ವಾಸ ಗೊತ್ತುವಳಿಗೆ ರಂಗು ತುಂಬಿತು. ಎರಡೂ ಬಣದ ನಾಯಕರ ನಡುವಿನ ಜಟಾಪಟಿಯಲ್ಲಿ ಬಿಜೆಪಿ ಮುಖಂಡರಿಗೆ ಮೊದಲ ಹಿನ್ನಡೆಯಾಗಿದ್ದು ತಡೆಯಾಜ್ಞೆ ಬಂದಿದೆ. ಈ ವಿಚಾರ ಕೇಳುತ್ತಲೇ ಅವಿಶ್ವಾಸ ಮಂಡನೆಯ ಪರವಾದ ಸದಸ್ಯರು ಕೆಂಡಾಮಂಡಲರಾಗಿ ಚುನಾವಣಾಧಿಕಾರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸದ್ಯ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದು ಮುಂದೇನಾಗಬಹುದೋ ಕಾದು ನೋಡಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *