Breaking News

ಯಲ್ಲಾಪುರದಲ್ಲಿ ರಂಗೇರಿದ ಹೋಳಿ – ಸಾಮಾನ್ಯರಂತೆ ಹೋಳಿ ಸಂಭ್ರಮಿಸಿದ ಶಾಸಕ ಹೆಬ್ಬಾರ್.


ಯಲ್ಲಾಪುರ : ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಹೋಳಿ ಹಬ್ಬದ ರಂಗಿನಾಟ ಎಲ್ಲೆಡೆ ಸಂಭ್ರಮ ತಂದಿತ್ತು. ಮುಂಜಾನೆಯಿಂದಲೆ ಪ್ರತಿ ಗಲ್ಲಿಯಲ್ಲು ಪುಡಿ ಬಣ್ಣದಾಟ ಪ್ರಾರಂಭವಾಗಿ ಮಕ್ಕಳು ಯುವಕ ಯುವತಿಯರು ಬಣ್ಣದಾಟವಾಡಿ ಸಂತಸಗೊಂಡರು..


ಮುಂದಿನ ವರ್ಷ ಗ್ರಾಮದೇವಿ ಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಹೋಳಿ ಹಬ್ಬದಾಚರಣೆ ನಡೆಯುವುದಿಲ್ಲವಾದ್ದರಿಂದ ಈ ವರ್ಷದ ಹೋಳಿ ಮಹತ್ವ ಪಡೆದಿತ್ತು.


ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಸಾಮಾನ್ಯರಂತೆ ಹಮ್ಮು ಬಿಮ್ಮು ಇಲ್ಲದಂತೆ ಎಲ್ಲರೊಂದಿಗೆ ಬೆರೆತು ಹೋಳಿ ಹಬ್ಬ ಆಚರಿಸಿದರು. ಬಣ್ಣಹಚ್ಚಿ ಹಚ್ಚಿಸಿಕೊಂಡು ಹಾಡಿಗೆ ಹೆಜ್ಜೆಹಾಕಿ ಕುಣಿದು ಕುಪ್ಪಳಿಸಿದರು.


ಪಟ್ಟಣದ ರವೀಂದ್ರ ನಗರ, ತಿಲಕ್ ಚೌಕ್, ಉದ್ಯಮನಗರ, ಕಾಳಮ್ಮ ನಗರದಲ್ಲಿ ರೈನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಿನಲ್ಲಿ ಎಲ್ಲೆಡೆ ಸಂತಸದಲ್ಲಿ ನಡೆದ ಹೋಳಿ ಸಂಭ್ರಮ ಅತ್ಯಂತ ಶಾಂತಿಯುತವಾಗಿ ನಡೆಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *