Breaking News

ವಿದ್ಯಾದಾನ ಮತ್ತು ನೇತ್ರದಾನ ಮಾಡಿದ ನಿವೃತ್ತ ಶಿಕ್ಷಕಿ ಭಾಗೀರಥಿ ಜನಾರ್ಧನ ಹೆಗಡೆ ನಿಧನ

ಪ್ರತಿಧ್ವನಿ ಯಲ್ಲಾಪುರ :  ನಿವೃತ್ತ ಶಿಕ್ಷಕಿ, ಶಿಕ್ಷಣಾಭಿಮಾನಿ ಹಾಗೂ ಸಮಾಜಮುಖಿ ವ್ಯಕ್ತಿತ್ವದ ತಾಲೂಕಿನ ಮಂಚಿಕೇರೆ ಬಳಿಯ ಕುಂಬ್ರಿಗುಡ್ಡೆಯ ಭಾಗೀರಥಿ ಜನಾರ್ದನ ಹೆಗಡೆ (82) ಅವರು ಭಾನುವಾರ ನಿಧನರಾಗಿದ್ದಾರೆ.


ಮುಂಡಗೇಸರ, ಕಳಚೆ, ತೋಳಗೋಡ, ಹಾಸಣಗಿ, ಕೋಸಗುಳಿಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ವಿಶೇಷ ಆದ್ಯತೆ ನೀಡಿ ಜನಪ್ರಿಯತೆ ಗಳಿಸಿದ್ದರು. ಮೃತ ಭಾಗೀರಥಿ ಹೆಗಡೆ ಅವರು ತಮ್ಮ ಸಾವಿನಲ್ಲಿಯು ಸಾರ್ಥಕತೆ ತೋರಿದ್ದು ಸಾವಿರಾರು ವಿದ್ಯಾರ್ಥಿಗಳ ಉತ್ತಮ ಬೆಳವಣಿಗೆಯನ್ನು ಕಂಡ ತಮ್ಮ ಕಣ್ಣುಗಳನ್ನು ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಮೃತರು ಪುತ್ರ, ಪುತ್ರಿ ಅಪಾರ ಬಂಧು ಬಳಗನ್ನು ಅಗಲಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಕಟ್ಟಿಗೆ ಡಿಪೋ ಸಾರ್ವಜನಿಕ ಗಜಾನನೋತ್ಸವ ಸಮಿತಿ ಆವಾರದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮ ಆಯೋಜನೆ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕಟ್ಟಿಗೆ ಡಿಪೋ “ಸಾರ್ವಜನಿಕ ಶ್ರೀ ಗಜಾನನೋತ್ಸವ ಸಮಿತಿ ” ಆವಾರದಲ್ಲಿ ಪ್ರಸಕ್ತ ವರ್ಷ ಚೌತಿ …

Leave a Reply

Your email address will not be published. Required fields are marked *