
ಪ್ರತಿಧ್ವನಿ,ಯಲ್ಲಾಪುರ- ತಾಲ್ಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಮದ್ಯದ ಬಾಕ್ಸ್ ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗಟಾರಕ್ಕೆ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.

ಕಲ್ಬುರ್ಗಿಯಿಂದ ಉಡುಪಿಗೆ ವಿವಿಧ ಮಾದರಿಯ ಮದ್ಯದ ಬಾಟಲ್ ಇರುವ ಬಾಕ್ಸ್ ಗಳನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಯು ತಾಲ್ಲೂಕಿನ ಅರ್ತಿಬೈಲ್ ಘಟ್ಟ ಪ್ರದೇಶದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಲಾರಿಯ ಮುಂಬಾಗ ಜಕಂ ಆಗಿದ್ದು ಲಾರಿಯಲಿದ್ದ ಚಾಲಕ ಮತ್ತು ಸಹಾಯಕನಿಗೆ ಪೆಟ್ಟಾಗಿದೆ. ಮಾಹಿತಿ ಲಭಿಸುತ್ತಲೆ ತಕ್ಷಣ 108 ಆಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಯಲ್ಲಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.





Prathidvani Yellapura