Breaking News

ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸುರೇಶ್ ಬೋರ್ಕರ್ ಅಧಿಕಾರ ಸ್ವೀಕಾರ.


ಪ್ರತಿಧ್ವನಿ,ಯಲ್ಲಾಪುರ : ಸೇವೆ ಮತ್ತು ಶಿಸ್ತು ಅಳವಡಿಸಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜೀವನದ ಮೌಲ್ಯಗಳನ್ನು ಹೆಚ್ಚಿಸಿಕೊಂಡು ಬದುಕು ಸಾರ್ಥಕವಾಗಿಸಿಕೊಳ್ಳಲು ಲಯನ್ಸ್ ಸೇವಾ ಸಂಸ್ಥೆ ಜಗತ್ತಿನಾದ್ಯಂತ ಹೆಸರಾಗಿದೆ. ನಮ್ಮಲ್ಲಿ ಅರ್ಜಿ ಸಲ್ಲಿಸಿ ಸದಸ್ಯರಾಗುವ ಪದ್ದತಿ ಇಲ್ಲ ನಾವೆ ಗೌರವಯುತವಾಗಿ ಕರೆದು ಸದಸ್ಯತ್ವ ನೀಡುವ ಪದ್ದತಿ ಇದೆ ಇಂತಹ ಶ್ರೇಷ್ಠ ಸಂಸ್ಥೆ ಯಲ್ಲಿ ದೀರ್ಘಕಾಲದಿಂದ ಸಾಗುತ್ತಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಪಿಎಮ್‌ಜೆಎಫ್ ಲಯನ್ ಗಣಪತಿ ಎನ್‌ ನಾಯಕ್ ಹೇಳಿದರು.


ಅವರು ಪಟ್ಟಣದ ಗಾಂಧಿವೃತ್ತದಲ್ಲಿರುವ ಶ್ರೀರಾಮ್ ರೆಸಿಡೆನ್ಸಿ ಪಾರ್ಟಿ ಹಾಲ್ ನಲ್ಲಿ ನಡೆದ ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ನೂತನ ಅಧ್ಯಕ್ಷರಿಗೆ ಪದವಿ ಪ್ರಧಾನ ಮಾಡಿ ಮಾತನಾಡಿದರು.


ಸಭೆಯಲ್ಲಿ ಭಾಗವಹಿಸಿದ್ದ ಝೋನಲ್ ಚೇರ್ ಪರ್ಸನ್ ಆರ್.ಹೆಚ್. ನಾಯಕ್ ನೂತನವಾಗಿ ಸೇರ್ಪಡೆಯಾದ ಸದಸ್ಯರಿಗೆ ಪ್ರಮಾಣವಚನ ಭೋದಿಸಿ ಸಂಸ್ಥೆಗೆ ಬರಮಾಡಿಕೊಂಡರು.


ನೂತನ ಅಧ್ಯಕ್ಷ ಲಯನ್ ಸುರೇಶ್ ಬೋರ್ಕರ್ ಮಾತನಾಡಿ ಮನುಷ್ಯನ ಜೀವನ ಅತ್ಯಲ್ಪ ಸಮಯದ್ದಾಗಿದ್ದು ಭಗವಂತನ ಸೃಷ್ಟಿಯಲ್ಲಿ ಇರುವಷ್ಟು ದಿನ ಪರೋಪಕಾರಿಯಾಗಿ ಜನ ಸೇವೆ ಸಲ್ಲಿಸಬೇಕಿದೆ. ಇದರಲ್ಲೆ ಜೀವನದ ಸಾರ್ಥಕತೆ ಕಾಣಬಹುದಾಗಿದೆ. ಅರಣ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದಾಗ ಇಂತಹ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾದ್ಯವಾಗಿರಲಿಲ್ಲ ನಿವೃತ್ತಿ ನಂತರ ಅದನ್ನೆಲ್ಲಾ ಪೂರೈಸುತ್ತಿದ್ದೇನೆ. ನನ್ನ ಕೈಲಾದಷ್ಡು ಉತ್ತಮ ಸೇವಾ ಕಾರ್ಯದೊಂದಿಗೆ ಯಲ್ಲಾಪುರ ಲಯನ್ಸ್ ಕ್ಲಬ್ ಗೆ ಹೆಸರು ತರುವಲ್ಲಿ ಶ್ರಮಿಸಲಿದ್ದೇನೆ ಅದಕ್ಕಾಗಿ ಎಲ್ಲರ ಸಹಕಾರ ಕೋರುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ನೂತನವಾಗಿ 5 ಮಂದಿ ಸದಸ್ಯರು ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ನ ಸದಸ್ಯರಾದರು

ನೂತನ ಅಧ್ಯಕ್ಷ ಸುರೇಶ್ ಬೋರ್ಕರ್ ಅವರ ಶ್ರೀಮತಿ ಸುನಂದ ಪಾಟಣ್ಕರ್ ಸಹ ಲಯನ್ಸ್ ಕ್ಲಬ್ ಗೆ ಸೇರ್ಪಡೆಯಾಗುವ ಮೂಲಕ ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ನ ಮೊದಲ ಮಹಿಳಾ ಸದಸ್ಯರು ಎಂಬ ಹೆಗ್ಗಳಿಕೆಗೆ ಪಾತ್ರರಾದರು.


ನಿಕಟಪೂರ್ವ ಅಧ್ಯಕ್ಷ ಎಸ್.ಎನ್.ನಾಯ್ಕ್, ನೂತನ ಕಾರ್ಯದರ್ಶಿ ಎನ್.ಎ.ಭಟ್, ಖಜಾಂಚಿ ಶೇಷಗಿರಿ ಪ್ರಭು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಯನ್ ನಂದನ್ ಬಾಳಗಿ ಪಿಎಮ್‌ಜೆಎಫ್ ಗಣಪತಿ ಎನ್ ನಾಯಕ್ ಅವರನ್ನು ಪರಿಚಯಿಸಿದರು.
ಲಯನ್ ಶಾಂತಾರಾಮ್ ಹೆಗಡೆ ಝೋನಲ್ ಛೇರ್ ಪರ್ಸನ್ ಲಯನ್ ಆರ್.ಹೆಚ್. ನಾಯಕ್ ಅವರನ್ನು ಪರಿಚಯಿಸಿದರು.

ವಿವಿಧ ಸಂಘ ಸಂಸ್ಥೆಗಳ ಗಣ್ಯರು ನೂತನ ಪದಾಧಿಕಾರಿಗಳ ಹಿತೈಷಿಗಳು ಅಧ್ಯಕ್ಷರು ಪದಾಧಿಕಾರಿಗಳಿಗೆ ಅಭಿನಂದಿಸಿ ಗೌರವಿಸಿದರು.

ಲಯನ್ಸ್ ಬಳಗದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಸ್ನೇಹಿತರು ಪ್ರಮುಖರು ಉಪಸ್ಥಿತರಿದ್ದರು. ದ್ವಜ ವಂದನೆಯೊಂದಿಗೆ ಕಾರ್ಯಕ್ರಮ ಪ್ರಾರಂಬಿಸಿದರು ವಿಶ್ವ ಶಾಂತಿಗಾಗಿ ಮೌನಾಚರಿಸಿ ಕೊನೆಯಲ್ಲಿ ರಾಷ್ಟ್ರಗೀತೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ಲಯನ್ ಎಸ್.ಎಲ್.ಭಟ್ ನಿರೂಪಿಸಿದರು.
ಲಯನ್ ಶೇಷಗಿರಿ ಪ್ರಭು ವಂದಿಸಿದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಿಮಿತ್ತ ಆಗಮಿಸಿದ ಎಲ್ಲರಿಗು ಔತಣಕೂಟ ಏರ್ಪಡಿಸಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *