Breaking News

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ ವರದಿ,

ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಆ,14 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬಾಲಗೋಪಾಲ ಮತ್ತು ರಾಧಾಕೃಷ್ಣ ವೇಷ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀ ವೆಂಕಟ್ರಮಣ ಮಠದ ಸಭಾಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಮಾಪ್ಸೇಕರ್ ಸ್ವಾಗತಿಸಿದರು.


ಶ್ರೀನಿಧಿ ಮಲ್ಯ ಮತ್ತು ಸಂಗಡಿಗರು ಸ್ವಾಗತ ನೃತ್ಯ ಮಾಡಿದರು.
ನಂತರ ವಿದ್ಯಾರ್ಥಿಗಳು ಬಾಲ ಗೋಪಾಲ ಮತ್ತು ಸುಂದರವಾದ ರಾಧಾ ಮತ್ತು ಕೃಷ್ಣ ವೇಷದಲ್ಲಿ ವೇದಿಕೆಗೆ ಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಬಣ್ಣಬಣ್ಣದ ಪರಿಕರಗಳು, ಆಭರಣಗಳು ಹಾಗೂ ಮುಖವರ್ಣಗಳಿಂದ ಮಕ್ಕಳು ಬೃಂದಾವನದ ರಾಧಾಕೃಷ್ಣರಂತೆ ಕಂಗೊಳಿಸಿದರು. ಪ್ರೇಕ್ಷಕರು ಪೋಷಕರು ಹರ್ಷದಿಂದ ಕರತಾಡನದ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿದರು.
ಕೊನೆಯಲ್ಲಿ ವಿಜೇತರ ಹೆಸರುಗಳನ್ನು ಘೋಷಿಸಿ ಬಹುಮಾನಗಳನ್ನು ಪ್ರಧಾನ ಮಾಡಲಾಯಿತು. ಸಹ ಶಿಕ್ಷಕಿ ದೇವಕಿ ಕಾಮತ ವಂದಿಸಿದರು.

ರಂಗು ರಂಗಾದ ಬಾಲಗೋಪಾಲ ಮತ್ತು ರಾಧಾಕೃಷ್ಣ ರ ಚಿತ್ರಗಳು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ತೊಗಲು ಹರಳಯ್ಯ ಟ್ರಸ್ಟ (ರಿ) ವತಿಯಿಂದ ಕುಲಕಸುಬು ಜಾಗದ ಸ್ವಚ್ಚತೆ – ಕಚೇರಿ ಉದ್ಘಾಟನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ: ಕುಟುಂಬದ ಹಿರಿಯರು ತಲ ತಲಾಂತರದಿಂದ ಕುಲಕಸಬಾದ ತೊಗಲು …

Leave a Reply

Your email address will not be published. Required fields are marked *