Breaking News

ನವರಾತ್ರಿ ಉತ್ಸವ ಸಂಭ್ರಮ ಗ್ರಾಮದೇವಿ ಸಾನಿದ್ಯದಲ್ಲಿ ಅನ್ನಪ್ರಸಾದ ಸೇವೆ.🔔🚩

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಸೀಮೆಯ ಶಕ್ತಿ ಪೀಠಗಳಲ್ಲಿ ಒಂದಾಗಿರುವ ” ಯಲ್ಲಾಪುರ ಗ್ರಾಮದೇವಿ ” ಸಾನಿದ್ಯದಲ್ಲಿ ಅನ್ನ ಪ್ರಸಾದ ಸೇವೆ ಸಾಂಗವಾಗಿ ನೆರವೇರಿತು.


ಪ್ರತಿ ವರ್ಷದಂತೆ ಈ ವರ್ಷವು ಯಲ್ಲಾಪುರ ಪಟ್ಟಣದ ಭಗತ್ ಸಿಂಗ್ ಆಟೋ ಚಾಲಕ ಮಾಲಕರ ಸಂಘ, ಗ್ರಾಮದೇವಿ ಟ್ಯಾಕ್ಸಿ ಚಾಲಕ ಮಾಲಕರ ಸಂಘ, ಬಸವೇಶ್ವರ ಗೂಡ್ಸ್ ರಿಕ್ಷಾ ಚಾಲಕ ಮಾಲಕರ ಸಂಘ, ಕನ್ನಡ ಪರ ಸಂಘಟನೆಗಳು ಹಾಗು ಧಾನಿಗಳ ಸಹಕಾರದಿಂದ ಸಹಸ್ರಾರು ಸಂಖ್ಯೆ ಭಕ್ತರಿಗೆ ಮೂರು ದಿನಗಳ ಕಾಲ ಅನ್ನಪ್ರಸಾದ ಸೇವೆ ನೀಡಲಾಗುತ್ತಿದೆ.

ಮಂಗಳವಾರದ ಅನ್ನ ಪ್ರಸಾದ ಸೇವೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಭಕ್ತರ ದಂಡೇ ಹರಿದು ಬಂದಿತ್ತು. ಅನ್ನ ಪ್ರಸಾದ ಸ್ವೀಕರಿಸಿದ ಭಕ್ತ ಸಮೂಹ ಸಂತುಷ್ಟರಾಗಿ ಸಂಘಟಕರನ್ನು ಮನಃ ತುಂಬಿ ಶ್ಲಾಘಿಸಿದರು.


ಅನ್ನ ಪ್ರಸಾದ ಸೇವೆ ಸಂಘಟನೆಯ ಪ್ರಮುಖರಾದ ಸಂತೋಷ ನಾಯ್ಕ್, ಸೋಮೇಶ್ವರ ನಾಯ್ಕ್, ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ ರೇವಣಕರ್ ಹಾಗು ಸ್ನೇಹಿತರ ಬಳಗ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಅನ್ನ ಪ್ರಸಾದ ಸೇವೆಯಲ್ಲಿ ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *