
,ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ ತಾನ್ ಸೇನ್ ಸಮ್ಮಾನ್ ಪುರಸ್ಕಾರಕ್ಕೆ ಭಾಜನರಾದ, ನಮ್ಮ ನಾಡಿನ ಶ್ರೇಷ್ಠ ಸಂಗೀತ ವಿದ್ವಾಂಸಂ ತಾಲೂಕಿನ ಪಂ.ಗಣಪತಿ ಭಟ್ ರಂದು ಹಾಸಣಗಿಯವರನ್ನು ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನವತಿಯಿಂದ ಡಿ.17 ರಂದು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಿತರಾದ ಪಂ.ಗಣಪತಿ ಭಟ್ ಹಾಸಣಗಿಯವರು ಕೃತಜ್ಞತೆಯ ಮಾತುಗಳನ್ನಾಡಿದರು.

ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದ ಅಡಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ರೀರಂಗ ಕಟ್ಟಿ, ಆರ್.ಎನ್.ದುಂಡಿ, ನಾಗೇಂದ್ರ ಭಟ್ಟ ಕುಂಬಾರಕುಳಿ, ಸೂರ್ಯನಾರಾಯಣ ಭಟ್ಟ ಮಾಳಕೊಪ್ಪ, ಕೃಷ್ಣ ಭಟ್ಟ ನಾಯಕನಕೆರೆ, ಯಮುನಾ ನಾಯ್ಕ, ಯು.ಎಸ್.ಭಟ್ಟ, ವಿಶ್ವೇಶ್ವರ ಗಾಂವ್ಕಾರ್, ನಾಗರಾಜ ಮದ್ಗುಣಿ ಹಾಗೂ ಗ್ರಾಮಸ್ಥರು ಇದ್ದರು.
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜಿ.ಎನ್.ಭಟ್ ತಟ್ಟಿಗದ್ದೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ನಿರ್ವಹಿಸಿದರು.
Prathidvani Yellapura