


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಳಚೆ ಗ್ರಾಮದಲ್ಲಿದ್ದ ಪ್ರೌಢಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಛಲ್ಪಟ್ಟಿದ್ದು ಅದೇ ಶಾಲೆಯನ್ನು ಮದನೂರು ಗ್ರಾ.ಪಂ ವ್ಯಾಪ್ತಿಯ ಹುಣಶೆಟ್ಟಿಕೊಪ್ಪಕ್ಕೆ ಸ್ಥಳಾಂತರಿಸಲಾಗಿದೆ.
ಈ ಸ್ಥಳಾಂತರ ಪ್ರಕ್ರಿಯೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ, ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ಹಾಗೂ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್ ಗಾಂವ್ಕರ ಪ್ರಯತ್ನದಿಂದ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಸಹಕಾರದಿಂದ ಕಾರ್ಯಸಾಧುವಾಗಿದ್ದು ಜನತೆಯ ಪರವಾಗಿ ಅಭಿನಂದನೆಗಳು ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕಾ ವಕ್ತಾರ ರವಿ ನಾಯ್ಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Prathidvani Yellapura