Breaking News

ಭಾರತ್ ಜೋಡೋ ಯುವ ಸಂಘಟನೆ (BJYS) ಅಭಿಯಾನಕ್ಕೆ ಕೈ ಜೋಡಿಸಿ – ಕರೆ ನೀಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಯುವ ದೃಷ್ಟಿಕೋನ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸಂಘಟನಾ ಶಕ್ತಿಯೊಂದಿಗೆ ಯುವಕರನ್ನು ಒಗ್ಗೂಡಿಸುವ ಭಾರತ್ ಜೋಡೋ ಯುವ ಸಂಘಟನೆ (BJYS) ಅಭಿಯಾನಕ್ಕೆ ಯಲ್ಲಾಪುರ – ಮುಂಡಗೋಡ – ಬನವಾಸಿ ವಿಧಾನಸಭಾ ಕ್ಷೇತ್ರದ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಬೇಕಿದೆ ಎಂದು ಕೆಪಿಸಿಸಿ ಸದಸ್ಯ ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಯುವ ಮುಖಂಡ ವಿವೇಕ್ ಹೆಬ್ಬಾರ್ ಯುವ ಜನತೆಗೆ ಕರೆ ನೀಡಿದ್ದಾರೆ.

ನಿಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಯುವಕರಿಗೆ ಈ ಸಂದೇಶವನ್ನು ಹೆಚ್ಚು ಶೇರ್ ಮಾಡಿ, ಸಂಘಟನೆಯ ಸದಸ್ಯತ್ವ ಪಡೆದು ಯುವ ಶಕ್ತಿಯನ್ನು ಮತ್ತಷ್ಟು ಬಲಪಡಿಸೋಣ. ” ಭಾರತ ಜೋಡೋ ಯುವ ಸಂಘ ಯುವ ಶಕ್ತಿ – ಭಾರತದ ಭವಿಷ್ಯ “ಯಲ್ಲಾಪುರ, ಮುಂಡಗೋಡ, ಬನವಾಸಿ ವಿಧಾನಸಭಾ ಕ್ಷೇತ್ರದ ಯುವಕ,ಯುವತಿಯರೇ ಬನ್ನಿ — ಯುವ ಶಕ್ತಿಯನ್ನು ಸಂಘಟಿಸೋಣ ! ಎಂದು ಕರೆ ನೀಡಿದ್ದಾರೆ.

ಇಂದೇ ಸದಸ್ಯರಾಗಿ — ಯುವ ಶಕ್ತಿಯೊಂದಿಗೆ ಭಾರತವನ್ನು ಮತ್ತಷ್ಟು ಬಲಿಷ್ಠಗೊಳಿಸೋಣ. ಸದಸ್ಯತ್ವ ಪಡೆಯಲು: https://bjys.karnataka.gov.in/ ಭೇಟಿ ನೀಡಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *