Breaking News

ಭರಣಿ ವಿಶ್ವನಾಥನ ಸನ್ನಿಧಿಯಲ್ಲಿ ಶ್ರಾವಣ ಮಾಸದ ಪ್ರಥಮ ಸೋಮವಾರ ಪೂಜೆ ಸಂಪನ್ನ.

ಪ್ರತಿಧ್ವನಿ ಯಲ್ಲಾಪುರ : ಭರಣಿಯ ಶ್ರೀ ಕಾಶೀ ವಿಶ್ವನಾಥ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಥಮ ಸೋಮವಾರದಂದು ವಿಶೇಷ ಪೂಜೆ ಭಜನೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಸಂಪನ್ನಗೊಂಡಿತು. ‘ಶ್ರೀ ಮಾರುತೇಶ್ವರ ಭಜನಾ ಮಂಡಳಿ ಮರಗುಂಡಿ’ ಇವರಿಂದ ಭಜನಾ ಸೇವೆ ನೆರವೇರಿತು.

ಸತ್ಸಂಗದಲ್ಲಿ ವಿಶೇಷ ವ್ಯಕ್ತಿಯಾಗಿ, ಸಾಮಾಜಿಕ ರಾಜಕೀಯವಾಗಿ ತೊಡಗಿಸಿಕೊಂಡಿರುವ ,ಸಹಕಾರಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸತತ ಮೂರನೇ ಬಾರಿಗೆ ಕೊರ್ಲಕಟ್ಟಾ ಸೊಸೈಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿರುವ ‘ಶ್ರೀ ರಾಜೇಶ್ ನಾಯ್ಕ ಕಂಡ್ರಾಜಿ’ ಇವರನ್ನು ಆಹ್ವಾನಿಸಿ ಸನ್ಮಾನಿಸಲಾಯಿತು.

ಅನ್ನಸಂತರ್ಪಣೆ ವಹಿಸಿಕೊಂಡಿದ್ದ ಶ್ರೀಮತಿ ಭುವನೇಶ್ವರಿ ಮತ್ತು ಶ್ರೀ ಮಹಾಬಲೇಶ್ವರ ನಾಯ್ಕ ಬೆಳಲೆ ದಂಪತಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಶ್ರೀ ಸದಾನಂದ ನಾಯ್ಕ (ದೈ.ಶಿಕ್ಷಕರು, ಮಂಚಿಕೆರಿ), ಶ್ರೀ ತುಕಾರಾಂ ನಾಯ್ಕ (ಭಜನಾ ಮಂಡಳಿ ಅಧ್ಯಕ್ಷರು), ಶ್ರೀ ಮಂಜುನಾಥ ನಾಯ್ಕ ಹೆಗ್ಗರಣಿ, ಶ್ರೀ ಗೋಪಾಲ ನಾಯ್ಕ ಕಾನಗೋಡು, ಮತ್ತು ಶ್ರೀ ರವಿ ಪೂಜಾರಿ ಉಪಸ್ಥಿತರಿದ್ದರು. ಭಕ್ತರೆಲ್ಲರಿಗೂ ಭಗವಂತನ ಅನುಗ್ರಹವಾಗಲಿ ಎಂದು ಧರ್ಮದರ್ಶಿಗಳಾದ ಶ್ರೀ ಎ ಜಿ ನಾಯ್ಕ ಭರಣಿ ಪ್ರಾರ್ಥಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *