Breaking News

ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ಬೆಂಗಳೂರಿನಲ್ಲಿ ರಾಜ್ ಭವನ್ ಚಲೋ ಹಮ್ಮಿಕೊಳ್ಳಲಾಗಿದೆ – ಶಾಂತರಾಮ ನಾಯಕ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ••

ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಿಮ್ಮೆಟ್ಟಿಸಲು ಪರ್ಯಾಯ ನೀತಿಗಳಿಗಾಗಿ ಅಖಿಲ ಭಾರತದಾದ್ಯಂತ ಮುಷ್ಕರ ಏರ್ಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 72 ಗಂಟೆಗಳ ಮಹಾಧರಣಿ ಹಮ್ಮಿಕೊಂಡಿದೆ. ಉತ್ತರಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ ಸಭೆ ಸೇರಿ ಬೆಂಗಳೂರಿನಲ್ಲಿ ನಡೆಯಲಿರುವ ಮಹಾಧರಣಿಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದೇವೆ ಎಂದು ಕ.ಇ.ನಿ.ಕಾ ಫೆಡರೇಶನ್ ಜಿಲ್ಲಾ ಉಪಾಧ್ಯಕ್ಷ ಶಾಂತಾರಾಂ ನಾಯಕ ಹೇಳಿದರು.


ಅವರು ಪಟ್ಟಣದ ದೇವಿ ದೇವಸ್ಥಾನ ರಸ್ತೆಯಲ್ಲಿರುವ ತಮ್ಮ ಕಚೇರಿಯ ಆವಾರದಲ್ಲಿ ನ.26,27 ಮತ್ತು 28ರಂದು ಮೂರು ದಿನಗಳ ಕಾಲ ನಡೆಯಲಿರುವ ಮಹಾಧರಣಿಯ ಭಿತ್ತಿಚಿತ್ರ ಅನಾವರಣಗೊಳಿಸಿ ಮಾತನಾಡಿದರು.
ಕಾರ್ಮಿಕರ ಒಳಿತಿಗಾಗಿ ಮತ್ತು ರೈತಾಪಿ ವರ್ಗದವರ ಅಭ್ಯುದಯಕ್ಕಾಗಿ ಸರ್ಕಾರ ಅನೇಕ ಬೇಡಿಕೆಗಳನ್ನು ಈಡೇರಿಸಬೇಕಿದ್ದು 21 ಹಕ್ಕೊತ್ತಾಯಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರ ಅನುಷ್ಠಾನಕ್ಕೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್,ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘ ಹಾಗೂ ಉತ್ತರಕನ್ನಡ ಜಿಲ್ಲಾ ಸಮಿತಿಗಳು ಭಾಗವಹಿಸಲಿದ್ದು 5೦,೦೦೦ಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ತಿಲಕ್ ಜೆ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ಹನುಮಂತ ಸಿಂದಗಿ, ತಿಮ್ಮಪ್ಪ ಎಸ್ ಗೌಡ, ಜಿಲ್ಲಾ ಕಾರ್ಯದರ್ಶಿ ಕೃಷ್ಣ ಭಟ್ಟ, ಜಿಲ್ಲಾ ಪದಾಧಿಕಾರಿ ಜ್ಯೋತಿ ನಾರ್ವೇಕರ, ಶಶಿಕಲಾ , ಚಂದ್ರಕಾಂತ ಪುತ್ತು ಮರಾಠೆ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *