Breaking News

ಯಲ್ಲಾಪುರದ ವಿವಿದೆಡೆ ನಡೆದ ಚಂಪಾಷಷ್ಠಿ ವೈಭವ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವಿವಿಧ ಭಾಗಗಳಲ್ಲಿ ಚಂಪಾಶೆಟ್ಟಿ ವಿಶೇಷ ಪೂಜೆಗಳು ಜರುಗಿದವು. ಭಕ್ತಾದಿಗಳು ಮುಂಜಾನೆಯಿಂದಲೇ ನಾಗದೇವರ ಸ್ಥಳಗಳಲ್ಲಿ ಭಕ್ತಿಭಾವಗಳಿಂದ ವಿವಿಧ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು.

ಚಂಪಾ ಷಷ್ಠಿ ಪ್ರಯುಕ್ತ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್‌ ಉದ್ಯಮ ನಗರದ ನಾಗರ ದೇವಾಲಯದ ನಾಗದರ್ಶನ ಪಡೆದು ಪೂಜೆ ಸಲ್ಲಿಸಿದರು.


ಪಟ್ಟಣದ ಉದ್ಯಮ ನಗರದಲ್ಲಿರುವ ಏಕೈಕ ನಾಗ ದೇವಾಲಯದಲ್ಲಿ ಭಕ್ತಸಾಗರವೇ ತುಂಬಿತ್ತು. ಹಾಲಿನ ಅಭಿಷೇಕ , ಪುಷ್ಪಾಲಂಕಾರ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ಭಕ್ತಾದಿಗಳು ಕಣ್ತುಂಬಿಕೊಂಡರು. ಮದ್ಯಾಹ್ನ ಅನ್ನಸಂತರ್ಪಣೆ ನೆರವೇರಿದ್ದು ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ತಾಲೂಕು ಪಂಚಾಯತ್ ವಸತಿ ಗೃಹ ಸಂಕೀರ್ಣದಲ್ಲಿರುವ ನಾಗದೇವರ ದರ್ಶನ ಪಡೆದ ಶಾಸಕ ಹೆಬ್ಬಾರ್ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು


ಪಟ್ಟಣದ ತಾಲೂಕು ಪಂಚಾಯಿತಿ ವಸತಿ ಗೃಹಗಳ ಆವರಣದಲ್ಲಿರುವ ನಾಗರ ಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಶೇಷ ಅಲಂಕಾರದೊಂದಿಗೆ ಪೂಜೆಗಳು ನಡೆದವು. ಭಕ್ತರು ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.


ಪಟ್ಟಣದ ದೇವಿ ಮೈದಾನದ ನಾಗರ ಕಟ್ಟೆ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.

ಕೋಟೆ ಕರಿಯಮ್ಮ ಆವರಣದಲ್ಲಿರುವ ನಾಗ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಪ್ರಯುಕ್ತ ಭಕ್ತಿಭಾವದ ಪೂಜೆಗಳು ಜರುಗಿತು.

ಸಂಜೆ ಆಶ್ಲೇಷ ಬಲಿ ಪೂಜೆ ನೆರವೇರಿತು. ನೂರಾರು ಭಕ್ತಾದಿಗಳು ನಾಗದೇವರಿಗೆ ಹಾಲೆರೆದು ಪೂಜೆ ಸಲ್ಲಿಸಿ ಕೃತಾರ್ಥರಾದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *