Breaking News

ಪಕ್ಷಗಳ ಅಬ್ಬರದ ಪ್ರಚಾರದ ನಡುವೆ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಗಾಗಿ ಪಕ್ಷೇತರ ಅಭ್ಯರ್ಥಿ ಆನಂದ್ ಭಟ್ ಏಕಾಂಗಿ ಮತಯಾಚನೆ.


ಪ್ರತಿಧ್ವನಿ,ಯಲ್ಲಾಪುರ : ಚುನಾವಣೆಯಲ್ಲಿ ಸ್ಪರ್ಧಿಸಿ ಘಟಾನುಘಟಿ ರಾಜಕೀಯ ಪಕ್ಷಗಳ ಎದುರು ಗೆದ್ದಬಿಡುವೆನೆಂಬ ಹಮ್ಮು ಬಿಮ್ಮು ನನ್ನಲಿಲ್ಲ. ಆದರೆ ನಿಧಾನವಾಗಿಯಾದರು ಮತದಾರರಲ್ಲಿ ಅರಿವು ಮೂಡಿಸಿ ಎಂದಿಗಾದರು ಒಮ್ಮೆ ಎಚ್ಚೆತ್ತುಕೊಳ್ಳುವ ಮತದಾರ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಯತ್ತ ಗಮನ ಹರಿಸಲಿದ್ದಾನೆ. ಆ ಛಲದಿಂದಲೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವಿರುವ ಎಲ್ಲಾ ಗೌರವಾನ್ವಿತ ಮತದಾರರಲ್ಲಿ ಏಕಾಂಗಿಯಾಗಿ ಮತ ಯಾಚಿಸುತ್ತಿದ್ದೇನೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆನಂದ್ ಜಿ ಭಟ್ ಹೇಳಿದರು.


ಅವರು ಪಟ್ಟಣದಾದ್ಯಂತ ಆಟೋರಿಕ್ಷಾದಲ್ಲಿ ಏಕಾಂಗಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿ ಮತದಾರರಲ್ಲಿ ಮತಯಾಚಿಸಿದರು.
ಅಬ್ಬರದ ಪ್ರಚಾರವಾಗಲಿ, ದೊಡ್ಡ ಕಟೌಟ್ ಗಳಾಗಲಿ, ಹಣದ ಆಮಿಷವಾಗಲಿ, ಜಾತಿ ಧರ್ಮದ ಅಸ್ತ್ರವಾಗಲಿ, ದೊಡ್ಡ ಪ್ರಮಾಣದ ಸಮಾವೇಶವಾಗಲಿ ಮಾಡದೆ ಜನರ ಸಂಕಷ್ಟಗಳನ್ನು ಸರಳವಾಗಿಯೆ ಪ್ರಚಾರ ಮಾಡುತ್ತ ತಿಳಿಯಬಹುದಾಗಿದೆ. ಈ ದಿಸೆಯಲ್ಲಿ ನನ್ನ ಏಕಾಂಗಿ ಪ್ರಚಾರ ಕಾರ್ಯ ನಿರ್ವಿಘ್ನವಾಗಿ ಸಾಗಿದೆ ವ್ಯವಸ್ಥೆ ಬದಲಾಗಬೇಕಿದೆ ಅದಕ್ಕಾಗಿ ಮತದಾರ ಸಿದ್ದನಾಗಬೇಕಿದೆ ಎಂದು ವಿವರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *