Breaking News

ಉಸ್ತುವಾರಿ ಸಚಿವರಾಗಿ  26 ದಿನ ಕಳೆದರು ಯಲ್ಲಾಪುರ ಕ್ಷೇತ್ರ ಕಾಲಿಡದ ಮಂಕಾಳ ವೈದ್ಯ ಏನಿದರ ಮರ್ಮ.?

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.


ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ನಂತರದ ಮೊದಲ ಅಧಿವೇಶನ ಜು.3 ರಿಂದ ನಡೆಯಲಿದ್ದು ನೂತನ ಸಚಿವರು ಸದನದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದರಾಗಬೇಕಿದ್ದು ಅದಕ್ಕಾಗಿ ಕನಿಷ್ಠ ಅಧ್ಯಯನ ಬೇಕಿದೆ ಇಲ್ಲವಾದಲ್ಲಿ ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಲಾಗದೆ ತಡವರಿಸಬೇಕಾಗುತ್ತದೆ. ಆದರೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಆಯ್ಕೆಯಾದಾಗಿನಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರದಿರುವುದು ಆಶ್ಚರ್ಯವಾಗಿದೆ.


ಜು.3 ರಿಂದ ನಡೆಯಲಿರುವ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆಗಳಿಗೆ ದ್ವನಿಯಾಗಬೇಕಿದೆ. ಆದರೆ ಸಚಿವರು ಇನ್ನೂ ಕ್ಷೇತ್ರಕ್ಕೆ ಕಾಲಿಡದಿದ್ದರೆ ಬೇಕಿರುವ ವ್ಯವಸ್ಥೆ ತಿಳಿಯುವುದಾದರು ಹೇಗೆ ? ತಿಳಿದುಕೊಳ್ಳದಿದ್ದಾಗ ಸದನ ಕಲಾಪದಲ್ಲಿ ನಮ್ಮ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಬೇಕಿರುವ ದುಡಿಯುವ ಕೈಗಳಿಗೆ ಕೆಲಸ ನೀಡಲು ಉದ್ಯಮ ಸ್ಥಾಪನೆ, ನೆನೆಗುದಿಗೆ ಬಿದ್ದಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಅನುಷ್ಟಾನಕ್ಕೆ ಪ್ರಯತ್ನ , ಅಪಘಾತಗಳ ಸರಮಾಲೆ ಕಾಣುತ್ತಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೆ ಏರಿಸುವ ಮತ್ತು ಅಪಘಾತಗಳಾದಾಗ ಚಿಕಿತ್ಸೆ ನೀಡಿ ಪ್ರಾಣ ಕಾಪಾಡುವ ಟ್ರಾಮಾ ಸೆಂಟರ್ ಸ್ಥಾಪನೆ, ಪ್ರವಾಸೋದ್ಯಮದಲ್ಲಿ ಹೆಚ್ಚಿನ ಅವಕಾಶಗಳಿದ್ದು ಅದರಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆ ಉನ್ನತೀಕರಣ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳ ಕುರಿತು ಬೆಳಕು ಚೆಲ್ಲಬಹುದಾಗಿದೆ.


ಈ ಎಲ್ಲಾ ಅಭಿವೃದ್ಧಿ ಕನಸುಗಳು ಮಾಜಿ ಸಚಿವ ಹಾಲಿ ಶಾಸಕ ಹೆಬ್ಬಾರ್ ಅವರದಾಗಿತ್ತು. ಅದಕ್ಕಾಗಿ ನಿರಂತರ ಪ್ರಯತ್ನವು ಸಾಗಿತ್ತು. ಸದ್ಯ ಸರ್ಕಾರ ಕಾಂಗ್ರೆಸ್‌ನದ್ದಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದು ಮಂಕಾಳ ವೈದ್ಯರಾಗಿರುವುದರಿಂದ ವಿರೋಧ ಪಕ್ಷದ ಶಾಸಕರಾಗಿರುವ ಹೆಬ್ಬಾರ್ ಅವರ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಲ ತುಂಬಬೇಕಿದೆ. ಇದಕ್ಕೆ ಸದನದಲ್ಲಿ ಸದ್ದು ನಿಮ್ಮದಾಗಬೇಕಿದೆ ಎಂಬುದು ಜನರ ಅಭಿಪ್ರಾಯವಾಗಿದೆ.


ಸದ್ಯ ಮುಂಗಾರು ತಡವಾಗಿ ಪ್ರಾರಂಭವಾಗಿದೆ ; ಇದಕ್ಕು ಮುನ್ನ ಬಿಸಿಲಿನ ಉಷ್ಣತೆಗೆ ಅಡಿಕೆ ತೋಟಗಳಲ್ಲಿ ಅನೇಕ ಮರಗಳು ಒಣಗಿ ನಿಂತವು, ಕೆಲವು ಹಿಂಗಾರದಲ್ಲಿ ಮಿಳ್ಳೆಗಳೆಲ್ಲ ಉದುರಿ ಬಾರಿ ನಷ್ಟವಾಗಿದೆ. ನೀರಿನ ಕೊರತೆಯಾಗಿ ಕೃಷಿ ಚಟುವಟಿಕೆ ತಡವಾಗಿ ಪ್ರಾರಂಭವಾಗುತ್ತಿದೆ, ಇದರಿಂದಾಗಿರುವ ಅಡ್ಡಪರಿಣಾಮಗಳಿಂದ ರೈತರು ದೃತಿಗೆಡದಂತೆ ಧೈರ್ಯ ತಬುವ ಕೆಲಸವಾಗಬೇಕಿದೆ ಇದಕ್ಕಾಗಿ ಉಸ್ತುವಾರಿ ಸಚಿವರ ಕ್ಷೇತ್ರ ಪ್ರವಾಸ ಅತ್ಯಂತ ಪ್ರಮುಖವಾಗಿದೆ ಎಂಬುದು ಪರಿಣಿತರ ಅಭಿಪ್ರಾಯವಾಗಿದೆ.



ಭಟ್ಕಳ ಶಾಸಕ ಮಂಕಾಳ ವೈದ್ಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಭಾಗ್ಯ ಪಡೆದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ 26 ದಿನಗಳು ಕಳೆದರು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಾರದಿರುವುದು ಕುತೂಹಲ ಮೂಡಿಸಿದೆ. ಹಳಿಯಾಳ ಕ್ಷೇತ್ರದ ಶಾಸಕ ಮಾಜಿ ಮಂತ್ರಿ ಆರ್.ವಿ.ದೇಶಪಾಂಡೆ ಅದಾಗಲೆ ಯಲ್ಲಾಪುರ ಭೇಟಿ ನೀಡಿ ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡಗೋಡು, ಬನವಾಸಿ ಸೇರಿದಂತೆ ಯಲ್ಲಾಪುರ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗು ಪದಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ಮಾಡಿರುವುದು ಗಮನಾರ್ಹ ಸಂಗತಿ.

ರಾಜ್ಯದ ವರಿಷ್ಟರು ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡಿದ್ದು ಅವರನ್ನೆ ಉಸ್ತುವಾರಿ ಮಂತ್ರಿ ಮಾಡಿದ್ದು ಸಂತಸ ಅದಾದ ನಂತರ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿಲ್ಲ ಎಂಬುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ ನಂತರ ಎಲ್ಲಾ ತಾಲೂಕುಗಳಿಗು ಸಚಿವರು ಭೇಟಿ ನೀಡಲಿದ್ದಾರೆ ಮತ್ತು ಅವರಿಗಿಂತ ಮುಂಚಿತವಾಗಿ ದೇಶಪಾಂಡೆ ಅವರು ಭೇಟಿ ನೀಡಿದ್ದು ಜಿಲ್ಲೆಯಲ್ಲಿ ನಮ್ಮ ಪಕ್ಷದ ಶಾಸಕರಿಲ್ಲದ ಎರಡು ಕ್ಷೇತ್ರವಿದ್ದು ಒಂದು ಕುಮಟ ಇನ್ನೊಂದು ಯಲ್ಲಾಪುರ ಹಾಗಾಗಿ ಆರ್.ವಿ.ಡಿ. ಯವರಿಗೆ ನಮ್ಮ ಕ್ಷೇತ್ರದ ಪೂರ್ಣ ಪರಿಚಯವಿರುವುದರಿಂದ ಭೇಟಿ ನೀಡಿದ್ದಾರೆ ಹೊರತು ಯಾವುದೆ ಬೇರೆ ಉದ್ದೇಶವಿಲ್ಲ. ಕ್ಷೇತ್ರದಲ್ಲಾಗುತ್ತಿರುವ ಎಲ್ಲಾ ಬೆಳವಣಿಗೆ ಮತ್ತು ಆಗಬೇಕಿರುವ ಕೆಲಸ ಕಾರ್ಯಗಳ ಮಾಹಿತಿ ಇಬ್ಬರು ನಾಯಕರಿಗೆ ತಿಳಿಸಲಾಗಿದೆ.
ಡಿ.ಎನ್.ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯಲ್ಲಾಪುರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *