


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾ.ಸೇ.ಯೋ.ಸ್ಥಳೀಯ ನಿರ್ದೇಶಕರ ಕಚೇರಿ ಬೆಂಗಳೂರು ,ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗೂ 2 ಇವುಗಳ ಸಂಯುಕ್ತ ಆಶ್ರಯದಲ್ಲಿ “ಔಪಚಾರಿಕ ಶಿಕ್ಷಣ ಹಾಗೂ ನಿಯಮಿತ ಉದ್ಯೋಗದಲ್ಲಿಲ್ಲದ ಯುವಕರ ಸಮೀಕ್ಷೆ “ಎಂಬ ವಿಷಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಿ.ಎಸ್ ಭಟ್ ಉದ್ಘಾಟಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಎನ್.ಎಸ್.ಎಸ್ ಘಟಕ 1 ರ ಕಾರ್ಯಕ್ರಮಾಧಿಕಾರಿ ರಾಮಕೃಷ್ಣೇಗೌಡ ಈ ಸಮೀಕ್ಷೆ ಬಹಳ ಮಹತ್ವದ್ದು ಇದನ್ನು ವಿದ್ಯಾರ್ಥಿಗಳು ಬಹಳ ಲಕ್ಷ್ಯವಹಿಸಿ ಜವಾಬ್ದಾರಿಯಿಂದ ಮಾಡಬೇಕೆಂದರು.

ನಂತರ ಕಾಲೇಜಿನ ಎನ್.ಎಸ್.ಎಸ್ ಘಟಕ 2 ರ ಕಾರ್ಯಕ್ರಮ ಅಧಿಕಾರಿಗಳಾದ ಡಿ.ಜಿ.ತಾಪಸ್ ಎನ್.ಎಸ್.ಎಸ್ಸ್ವಯಂ ಸೇವಕ ಸೇವಕಿಯರಿಗೆ ಸದರಿ ವಿಷಯದ ಸಮೀಕ್ಷೆ ಕುರಿತು ವಿವರವಾಗಿ ತರಬೇತಿ ನೀಡಿದರು.
ಕಾರ್ಯಕ್ರಮವನ್ನು ಎನ್.ಎಸ್.ಎಸ್ ವಿದ್ಯಾರ್ಥಿ ಕುಮಾರ್ ದಿನೇಶ್ ನಿರ್ವಹಿಸಿದನು. ಸ್ನೇಹ ಆಚಾರಿ ಎಲ್ಲರನ್ನು ಸ್ವಾಗತಿಸಿದಳು ಕಾರ್ಯಕ್ರಮದಲ್ಲಿ ಸುಮಾರು ೧೦೦ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
Prathidvani Yellapura