
ಪ್ರತಿಧ್ವನಿ,ಯಲ್ಲಾಪುರ : ಕಾರಣಗಳೇನೇ ಇರಲಿ ಇಂದಿನಿಂದ ಅಧಿಕಾರಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಹಾಗೂ ಜನಪರ ಆಡಳಿತ ನೀಡಲಿ ಎಂದು ನಾಗರೀಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಕಾರ್ಡುಗಳು ಹಾಗೂ ಅನೇಕ ಉಚಿತ ಕೊಡುಗೆಗಳು ಮತದಾರರ ಮೇಲೆ ಸಾಕಷ್ಟು ಪರಿಣಾಮ ಬೀರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
135 ಸ್ಥಾನಗಳಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿದ ಮತದಾರ ಪ್ರಭು ತನ್ನ ಕೆಲಸ ಮಾಡಿದ್ದಾನೆ. ಇನ್ನೇನಿದ್ದರೂ ನೀಡಿದ ಭರವಸೆಗಳನ್ನು ಪೂರೈಸುವುದು ಸರ್ಕಾರದ ಕೆಲಸವಾಗಿದೆ.
ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಮೊಟ್ಟ ಮೊದಲ ಸಂಪುಟ ಸಭೆಯಲ್ಲೇ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತರುವುದಾಗಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು.

ಮುಂದಿನ 5 ವರ್ಷಗಳ ಕಾಲ ನಿರಂತರವಾಗಿ ಸಿಗಲಿರುವ ಉಚಿತ ಸರ್ಕಾರಿ ಸವಲತ್ತುಗಳಿಗಾಗಿ ಕರ್ನಾಟಕದ ಜನತೆ ತುದಿಗಾಲಿನಲ್ಲಿ ಕಾಯುತ್ತಿದ್ದು ಆದಷ್ಟು ಶೀಘ್ರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Prathidvani Yellapura