Breaking News

ಹೆಲ್ಮೆಟ್ ಕಡ್ಡಾಯ – ಇಲ್ಲದೆ ಹೋದರೆ ದಂಡ ಕಟ್ಟುವುದು ಕಡ್ಡಾಯ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಸ್ರೀನ್ ತಾಜ್ ಮಹಿಳಾ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಹೆಲ್ಮೆಟ್ ಇಲ್ಲದ ಬೈಕ್ ಸವಾರರನ್ನು ಅಡ್ಡಗಟ್ಟಿ ದಂಡ ವಸೂಲಿ ಪ್ರಾರಂಭಿಸಿದ್ದಾರೆ. ವಾಹನ ಚಾಲನೆಯ ನಿಯಮಾವಳಿಗಳನ್ನು ಮೀರಿ ಅಂದರೆ ಹೆಲ್ಮೆಟ್ ಇಲ್ಲದಿರುವುದು, ಟ್ರಿಪಲ್ ರೈಡಿಂಗ್, ಇನ್ಶುರೆನ್ಸ್ ಇಲ್ಲದಿರುವುದು, ಅತಿ ವೇಗದಂತಹ ನಿಯಮಬಾಹಿರ ಚಾಲನೆಗೆ ಕಡ್ಡಾಯವಾಗಿ ದಂಡ ವಿಧಿಸುತ್ತಾ ಮತ್ತೆ ಈ ತಪ್ಪು ಮಾಡದಿರುವಂತೆ ಪ್ರತಿ ಸವಾರನಿಗೂ ಎಚ್ಛರಿಸುತ್ತಿರುವುದು ಕಂಡು ಬಂದಿತು.


ಕಳೆದ ಕೆಲವು ದಿನಗಳ ಹಿಂದೆ ಯಲ್ಲಾಪುರವನ್ನೇ ಬೆಚ್ಚಿಬೀಳಿಸಿದ ಬೈಕ್ ಅಪಘಾತವೊಂದು ತಟಗಾರ್ ಕ್ರಾಸ್ ಬಳಿ ಸಂಭವಿಸಿ ಟ್ರಿಪಲ್ ರೈಡಿಂಗ್ ಬರುತ್ತಿದ್ದ ಯುವಕರಲ್ಲಿ ಇಬ್ಬರು ಸ್ಥಳದಲ್ಲೇ ಅಸುನೀಗಿ ಓರ್ವ ಆಸ್ಪತ್ರೆ ದಾರಿ ಹಿಡಿದ ಘಟನೆಯ ಬೆನ್ನಲ್ಲೇ ಪೊಲೀಸ್ ಇಲಾಖೆ ಮತ್ತಷ್ಟು ಕಟ್ಟುನಿಟ್ಟಾಗಿ ವಾಹನ ಚಾಲನೆಯ ನಿಯಮಾವಳಿಗಳನ್ನು ಮತ್ತು ಮುನ್ನೆಚ್ಛರಿಕಾ ಕ್ರಮಗಳನ್ನು ಗಮನಿಸಿ ನಿಯಮ ಮೀರಿದ ಚಾಲಕರಿಗೆ ದಂಡ ವಿಧಿಸಲು ಪ್ರಾರಂಭಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಪಟ್ಟಣದಾದ್ಯಂತ ಹದಿಹರೆಯದ ಯುವಕರು ನಿಯಮಬಾಹಿರವಾಗಿ ವೇಗಮಿತಿ ಇಲ್ಲದೇ ಬೈಕ್ ಚಲಾಯಿಸಿ ಅಪಾಯ ತಂದುಕೊಳ್ಳುತ್ತಿದ್ದಾರಲ್ಲದೇ ಇತರರಿಗೂ ಅಪಾಯ ತಂದೊಡ್ಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿರುವುದು ಕೊಂಚ ಕಷ್ಟವೇ ಆದರೂ ಅಪಾಯ ತಪ್ಪಿಸುವ ನಡೆ ಶ್ಲಾಘನೀಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *