Breaking News

ಕಂಪ್ಲಿ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದು ರೇಣುಕಾ ಬಸವಣ್ಣಿ ಭೋವಿವಡ್ಡರ ಅಧ್ಯಕ್ಷರಾಗಿ , ಸದಾಶಿವ ನರಸಿಂಹ ಭಟ್ಟ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


ಕಳೆದ ಆಗಸ್ಟ್ ತಿಂಗಳಿನಲ್ಲಿ ಕಂಪ್ಲಿ ಗ್ರಾ.ಪಂಚಾಯತಕ್ಕೆ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣಾ ಆಯ್ಕೆ ಪ್ರಕ್ರಿಯೆಯಲ್ಲಿ ಸಮಯಕ್ಕೆ ಸರಿಯಾಗಿ ನಾಮಪತ್ರ ಸಲ್ಲಿಕೆಯಾಗದ ಕಾರಣ ಚುನಾವಣೆ ಮುಂದೂಡಿ ಆಯೋಗದ ನಿರ್ದೇಶನಕ್ಕೆ ಕಾಯಲಾಗಿತ್ತು. ಸದ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಡಿ.19ರ ಮಂಗಳವಾರದಂದು ಚುನಾವಣೆ ನಡೆದಿದೆ. 8 ಸದಸ್ಯ ಬಲ ಹೊಂದಿರುವ ಕಂಪ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ಮಂಗಲಾ ರಾಮಾ ನಾಯ್ಕ ಹಾಗೂ ರೇಣುಕಾ ಬಸವಣ್ಣಿ ಭೋವಿವಡ್ಡರ ನಾಮಪತ್ರ ಸಲ್ಲಿಸಿದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ಸದಾಶಿವ ನರಸಿಂಹಭಟ್ಟ ಹಾಗೂ ಶಬನಮ್ ಮೌಲಾಲಿ ಸಾಬ್ ನಾಮಪತ್ರ ಸಲ್ಲಿಸಿದ್ದರು. ಮಂಗಲಾ ರಾಮ ನಾಯ್ಕ ಅವರಿಗೆ 3 ಮತಗಳು ಹಾಗೂ ರೇಣುಕಾ ಬಸವಣ್ಣಿ ಭೋವಿವಡ್ಡರ 5 ಮತಗಳನ್ನು ಪಡೆದು ಜಯಶಾಲಿಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಬನಮ್ ಮೌಲಾಲಿ ಸಾಬ 3 ಮತಗಳನ್ನು ಪಡೆದರೆ ಸದಾಶಿವ ನರಸಿಂಹ ಭಟ್ಟ 5 ಮತಗಳನ್ನು ಪಡೆದು ಜಯಶಾಲಿಯಾದರು.

ಪ್ರತಿಧ್ವನಿ ಯಲ್ಲಾಪುರ ಯೂಟ್ಯೂಬ್ ದೃಶ್ಯಾವಳಿ ವೀಕ್ಷಿಸಿ


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದಾಕ್ಷಾಯಿಣಿ ಐ ನಾಯ್ಕ ಅವರು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ರುದ್ರಯ್ಯ ಹಿರೇಮಠ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *