





ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ಚನಿ ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಜೆಗಳಿಗಿರುವ ಮತದಾನವೆಂಬ ಸಾರ್ವಭೌಮ ಅಧಿಕಾರದ ಮಹತ್ವ ಸಾರುವ ವಿಡಿಯೋ ಸ್ಕ್ರೀನ್ ಜಾಗೃತಿ ಪ್ರಚಾರ ಮತ್ತು ಜಾಗೃತಿ ಪತ್ರ ವಿತರಣೆ ಕಾರ್ಯಕ್ರಮ ಜರುಗಿತು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣದಲಿದ್ದ ಪ್ರಯಾಣಿಕರಿಗೆ ಸುತ್ತಮುತ್ತಲಿನ ಅಂಗಡಿಕಾರರಿಗೆ ಮತದಾನದ ಮಹತ್ವದ ಬಗ್ಗೆ ವಿವರಿಸಿ ಹೇಳಿ ಜಾಗೃತಿ ಪತ್ರ ನೀಡಿದರು. ತಪ್ಪದೆ ಮತದಾನ ಮಾಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಇತರೆ ಸಿಬ್ಬಂದಿಗಳು ಜೊತೆಯಲಿದ್ದು ಸಹಕರಿಸಿದರು.


